ರಾಹುಲ್ ಗಾಂಧಿ 
ವಿದೇಶ

ಬಿಜೆಪಿ-ಆರ್‏ಎಸ್ಎಸ್ ಭಾರತವನ್ನು ವಿಭಜಿಸುತ್ತಿದೆ: ಜರ್ಮನಿಯಲ್ಲಿ ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷ ಜನರನ್ನು ಒಗ್ಗೂಡಿಸುತ್ತಿದ್ದರೆ ಬಿಜೆಪಿ ಮತ್ತು ಆರ್ ಎಸ್ ಎಸ್ ದೇಶ ವಿಭಜಿಸುವ ಮೂಲಕ ದ್ವೇಷವನ್ನು ಹರಡುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬರ್ಲಿನ್ : ಕಾಂಗ್ರೆಸ್ ಪಕ್ಷ ಜನರನ್ನು ಒಗ್ಗೂಡಿಸುತ್ತಿದ್ದರೆ ಬಿಜೆಪಿ ಮತ್ತು ಆರ್ ಎಸ್ ಎಸ್  ದೇಶ ವಿಭಜಿಸುವ ಮೂಲಕ ದ್ವೇಷವನ್ನು ಹರಡುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವೈವಿಧ್ಯತೆಯಲ್ಲಿ  ಏಕತೆ  ಕಾಂಗ್ರೆಸ್ ಚಿಂತನೆ  ಗುರುನಾನಕ್ ದೇವ್ ಅವರ ಕಾಲದಲ್ಲಿ ಬಂದಿತ್ತು ಎಂದರು.

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಭಾರತದಲ್ಲಿ ದ್ವೇಷವನ್ನು ಹರಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯುವಜನಾಂಗಕ್ಕೆ ಉದ್ಯೋಗ ಇಲ್ಲದಂತಾಗಿದ್ದು, ಭವಿಷ್ಯ ಆತಂತ್ರದಿಂದ ಕೂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ವಿವಿಧತೆಯಲ್ಲಿ ಏಕತೆ ಎಂಬುದರಲ್ಲಿ ನಂಬಿಕೆ ಇಟ್ಟುಕೊಂಡಿದ್ದು, ಎಲ್ಲಾರ ಒಳಿತಿಗಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ. ಬಿಜೆಪಿ ಸರ್ಕಾರ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಭಾರತ ಚೀನಾದೊಂದಿಗೆ ಪೈಪೋಟಿಗೆ ಇಳಿದಿದೆ.  ಉದ್ಯೋಗಕ್ಕಾಗಿ ಅಲ್ಲಿಗೆ ಹೋಗಬೇಕು ಇಲ್ಲವೇ ಇಲ್ಲಿಗೆ ಬರಬೇಕು ಎಂದರು.

ಚೀನಾ  24 ಗಂಟೆಯಲ್ಲಿ 50 ಸಾವಿರ ಉದ್ಯೋಗ ನೀಡುತ್ತಿದ್ದರೆ , ಭಾರತ ಒಂದು ಗಂಟೆಯಲ್ಲಿ ಕೇವಲ 450 ಜನರಿಗೆ ಉದ್ಯೋಗ ನೀಡುತ್ತಿದೆ.  ಆದರೆ, ಬಿಜೆಪಿ ಎಲ್ಲೆಡೆ  ದ್ವೇಷ ಹರಡುವ ಮೂಲಕ  ದೇಶದ ಸಂಸ್ಕೃತಿಯನ್ನು ಹಾಳುಮಾಡುತ್ತದೆ ಎಂದು ಆರೋಪಿಸಿದ ಅವರು, ಭಾರತವನ್ನು ಪ್ರಗತಿಪಥದಲ್ಲಿ ಕೊಂಡೊಯ್ಯಬೇಕಾಗಿದ್ದು, ಜರ್ಮನಿಯಲ್ಲಿರುವ ಭಾರತೀಯರು ಕಾಂಗ್ರೆಸ್ ಪಕ್ಷ ಬೆಂಬಲಿಸುವಂತೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡರು.

ರಾಹುಲ್ ಗಾಂಧಿ ಎರಡು ದಿನ ಜರ್ಮನಿ ಪ್ರವಾಸ ಮುಗಿಸಿದ್ದು, ಈಗ ಇಂಗ್ಲೆಂಡ್ ಭೇಟಿ ನೀಡುತ್ತಿದ್ದಾರೆ.   ಲಂಡನ್ ಸ್ಕೂಲ್ ಆಪ್ ಎಕಾನಾಮಿಕ್ಸ್ ನಲ್ಲಿ  ವಿದ್ಯಾರ್ಥಿಗಳೊಂದಿಗೆ ರಾಹುಲ್  ಗಾಂಧಿ ಸಂವಾದ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT