ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳುವುದಕ್ಕೆ ಪಾಕಿಸ್ತಾನ ಸಚಿವೆಯಿಂದ ಪ್ರಸ್ತಾವನೆ! 
ವಿದೇಶ

ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳುವುದಕ್ಕೆ ಪಾಕಿಸ್ತಾನ ಸಚಿವೆಯಿಂದ ಪ್ರಸ್ತಾವನೆ!

ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳುವುದಕ್ಕೆ ಪ್ರಸ್ತಾವನೆಯೊಂದನ್ನು ತಾವು ಸಿದ್ಧಪಡಿಸಿರುವುದಾಗಿ ಪಾಕಿಸ್ತಾನದ ಮಾನವ ಹಕ್ಕುಗಳ ಇಲಾಖೆ ಸಚಿವೆ ಶಿರೀನ್ ಮಝಾರಿ ಹೇಳಿದ್ದಾರೆ.

ಇಸ್ಲಾಮಾಬಾದ್: ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳುವುದಕ್ಕೆ ಪ್ರಸ್ತಾವನೆಯೊಂದನ್ನು ತಾವು ಸಿದ್ಧಪಡಿಸಿರುವುದಾಗಿ ಪಾಕಿಸ್ತಾನದ ಮಾನವ ಹಕ್ಕುಗಳ ಇಲಾಖೆ ಸಚಿವೆ ಶಿರೀನ್ ಮಝಾರಿ ಹೇಳಿದ್ದಾರೆ. 
ಶಿರೀನ್ ಮಝಾರಿ ಪಾಕಿಸ್ತಾನದ ಸೇನೆ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಈಗ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳುವುದಕ್ಕೆ ಪ್ರಸ್ತಾವನೆಯನ್ನು ಸಿದ್ಧಪಡಿಸಿರುವುದಾಗಿ ಹೇಳಿರುವುದು ಕುತೂಹಲ ಮೂಡಿಸಿದೆ. 
ತಮಗಿರುವ ಸೇನೆಯೊಂದಿಗಿನ ಉತ್ತಮ ಬಾಂಧ್ಯದಿಂದಾಗಿ ಶಿರೀನ್ ಮಝಾರಿ ಪಾಕಿಸ್ತಾನದ ರಕ್ಷಣಾ ಸಚಿವರಾಗುತ್ತಾರೆ ಎಂಬ ಊಹಾಪೋಹಗಳೂ ಇತ್ತು. ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಶಿರೀನ್ ಮಝಾರಿ, ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳುವುದಕ್ಕೆ ತಾವು ದೀರ್ಘಕಾಲದಿಂದ ಪ್ರಸ್ತಾವನೆಯೊಂದಕ್ಕೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುತ್ತಿದ್ದು, ಈಗ ಅದು ಪೂರ್ಣಗೊಂಡಿದೆ, ಈ ಪ್ರಸ್ತಾವನೆಯನ್ನು ಪ್ರಧಾನಿ ಇಮ್ರಾನ್ ಖಾನ್ ಹಾಗೂ ಸಚಿವ ಸಂಪುಟದ ಎದುರು ಮಂಡಿಸಲಾಗುವುದು, ಒಪ್ಪಿಗೆ ದೊರೆತರೆ ಪ್ರಸ್ತಾವನೆಯೊಂದಿಗೆ ಮುಂದುವರೆಯೋಣ ಎಂದು ಹೇಳಿದ್ದಾರೆ. 
ಕ್ವಾಯ್ದ್-ಇ-ಅಜಮ್ ವಿಶ್ವವಿದ್ಯಾನಿಲಯದಲ್ಲಿ ರಕ್ಷಣಾ ಹಾಗೂ ಕಾರ್ಯತಂತ್ರಕ್ಕೆ ಸಂಬಂಧಿಸಿದ ಅಧ್ಯಯನ ವಿಷಯದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಮಝಾರಿ, ಕೆಲಕಾಲ ಇನ್ಸ್ಟಿಟ್ಯೂಟ್ ಆಫ್ ಸ್ಟ್ರಾಟಜಿಕ್ ಸ್ಟಡೀಸ್ ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಟಿವಿ ಕಾರ್ಯಕ್ರಮದಲ್ಲಿ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳುವುದಕ್ಕೆ ತಮ್ಮ  ಬಳಿ ಪ್ರಸ್ತಾವನೆಯೊಂದು ಸಿದ್ಧವಿದೆ ಎಂದಷ್ಟೇ ಹೇಳಿದ್ದು ಹೆಚ್ಚಿನ ವಿವರಗಳನ್ನು ಮಝಾರಿ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT