ಬಿಮ್ ಸ್ಟೆಕ್ ನಾಯಕರು 
ವಿದೇಶ

ಬಿಮ್ ಸ್ಟೆಕ್ ಶೃಂಗಸಭೆ ಅಂತ್ಯ, ಅಧ್ಯಕ್ಷತೆ ಶ್ರೀಲಂಕಾಗೆ ವರ್ಗ

4ನೇ ಬಹುಕ್ಷೇತ್ರ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿಯ ಉಪಕ್ರಮ(ಬಿಐಎಂಎಸ್‌ಟಿಇಸಿ-ಬಿಮ್‌ಸ್ಟೆಕ್‌) ...

ಕಾಠ್ಮಂಡು: 4ನೇ ಬಹುಕ್ಷೇತ್ರ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿಯ ಉಪಕ್ರಮ(ಬಿಐಎಂಎಸ್‌ಟಿಇಸಿ-ಬಿಮ್‌ಸ್ಟೆಕ್‌) ಶೃಂಗಸಭೆಗೆ ಶುಕ್ರವಾರ ತೆರೆ ಬಿದ್ದಿದ್ದು, ಅಧ್ಯಕ್ಷತೆಯನ್ನು ಶ್ರೀಲಂಕಾಗೆ ವರ್ಗಾಯಿಸಲಾಗಿದೆ.
ಎರಡು ದಿನಗಳ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ನಿಷ್ಕ್ರಿಯ ಎಂದು ಟೀಕೆಗೆ ಗುರಿಯಾಗಿದ್ದ ಕೆಲವು ಪ್ರಾದೇಶಿಕ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಬಿಮ್ ಸ್ಟೆಕ್ ಹಾಲಿ ಅಧ್ಯಕ್ಷರಾಗಿರುವ ನೇಪಾಳ ಈಗ ಅಧ್ಯಕ್ಷತೆಯನನ್ನು ಶ್ರೀಲಂಕಾಗೆ ವರ್ಗಾಯಿಸಿದೆ.
ಈ ಸಂಸ್ಥೆ ಹೆಚ್ಚು ಹೆಚ್ಚು ಫಲಿತಾಂಶಗಳನ್ನು ನೀಡುವಂತಾಗಬೇಕು ಎಂದು ಬಿಮ್ ಸ್ಟೆಕ್ ನಿರ್ಗಮಿತ ಅಧ್ಯಕ್ಷ ಹಾಗೂ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಹೇಳಿದ್ದಾರೆ.
ಬಿಮ್ ಸ್ಟೆಕ್ ದಕ್ಷಿಣ ಏಷ್ಯಾದ ಏಳು ರಾಷ್ಟ್ರಗಳ ಅಂತಾರಾಷ್ಟ್ರೀಯ ಒಕ್ಕೂಟವಾಗಿದ್ದು, ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್‌, ಶ್ರೀಲಂಕಾ, ಥೈಲ್ಯಾಂಡ್‌, ಭೂತಾನ್‌ ಮತ್ತು ನೇಪಾಳ ಇದರ ಸದಸ್ಯ ರಾಷ್ಟ್ರಗಳಾಗಿವೆ. ಬ್ಯಾಂಕಾಕ್‌ ಘೋಷಣೆಯ ಮೂಲಕ 1997ರ ಜೂನ್‌ 6ರಂದು ಬಿಐಎಂಎಸ್‌ಟಿಇಸಿ ಅಸ್ತಿತ್ವಕ್ಕೆ ಬಂದಿದೆ.
ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು  ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸಿನಾ ಮತ್ತು ಮ್ಯಾನ್ಮಾರ್‌ ಮುಖ್ಯಸ್ಥ ವಿನ್‌ಮೈಂಟ್‌ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮೋದಿ ಇಂದು ಭಾರತಕ್ಕೆ ಮರಳಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT