ಸಾಂದರ್ಭಿಕ ಚಿತ್ರ 
ವಿದೇಶ

ಉಯ್ಘರ್ ಮುಸ್ಲಿಮರನ್ನು ಮುಕ್ತಗೊಳಿಸಿ: ಯುಎನ್ ಸಮಿತಿ ಸಲಹೆ ತಿರಸ್ಕರಿಸಿದ ಚೀನಾ

ಝಿನ್ಜಿಯಾಂಗ್ ಪ್ರಾಂತ್ಯದಲ್ಲಿರುವ ಅಪಾರ ಸಂಖ್ಯೆಯ ಉಯ್ಘರ್ ಮುಸ್ಲಿಮರನ್ನು ಬಂಧಿಸಲಾಗಿದೆ ಎಂಬ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಆರೋಪಗಳನ್ನು ಚೀನಾ ವಜಾಗೊಳಿಸಿದ್ದು, ಮಾಹಿತಿ ಪರಿಶೀಲಿಸದೆ ಆರೋಪ ಮಾಡಲಾಗಿದೆ ಎಂದು ಹೇಳಿಕೆ ನೀಡಿದೆ.

ಬೀಜಿಂಗ್  : ಝಿನ್ಜಿಯಾಂಗ್ ಪ್ರಾಂತ್ಯದಲ್ಲಿರುವ  ಅಪಾರ ಸಂಖ್ಯೆಯ ಉಯ್ಘರ್ ಮುಸ್ಲಿಮರನ್ನು ಬಂಧಿಸಲಾಗಿದೆ ಎಂಬ  ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಆರೋಪಗಳನ್ನು ಚೀನಾ ವಜಾಗೊಳಿಸಿದ್ದು,  ಮಾಹಿತಿ ಪರಿಶೀಲಿಸದೆ ಆರೋಪ ಮಾಡಲಾಗಿದೆ ಎಂದು ಹೇಳಿಕೆ ನೀಡಿದೆ.

ಝಿನ್ಜಿಯಾಂಗ್ ಪ್ರಾಂತ್ಯದಲ್ಲಿ  ಹೆಚ್ಚಿನ ಸಂಖ್ಯೆಯ ಉಯ್ಘರ್  ಹಾಗೂ  ಇನ್ನಿತರ ಅಲ್ಪಸಂಖ್ಯಾತ ಮುಸ್ಲಿಂರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟಿರುವ ಬಗ್ಗೆ ವರದಿಗಳು ಬಂದಿದ್ದು, ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಜಿನಿವಾದಲ್ಲಿನ ವಿಶ್ವ ಸಂಸ್ಥೆ  ಮಾನವ ಹಕ್ಕುಗಳ ಸಮಿತಿ ನಿನ್ನೆ ಹೇಳಿಕೆ ನೀಡಿತ್ತು.

 10 ಸಾವಿರದಿಂದ ಒಂದು ಬಿಲಿಯನ್ ವರೆಗೂ ಹೀಗೆ ಬಂಧನದಲ್ಲಿಡಲಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಈ ಹೇಳಿಕೆ ಕುರಿತಂತೆ  ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರೆ  ಹುವಾ ಚುನೈಯಿಂಗ್, ಝಿನ್ಜಿಯಾಂಗ್ ಪ್ರಾಂತ್ಯದಲ್ಲಿನ ಪರಿಸ್ಥಿತಿ ಪರಿಶೀಲನೆ ವೇಳೆಯಲ್ಲಿ ಕೆಲ ತಪ್ಪು  ಹೇಳಿಕೆಗಳನ್ನು ನೀಡಲಾಗಿದೆ.  ಯಾವುದೇ ಮಾಹಿತಿಯನ್ನು ಪರಿಶೀಲಿಸದೆ ಪರಿಶೀಲನೆ ಮಾಡಲಾಗಿದೆ.  ಇಲ್ಲಿನ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಝಿನ್ಜಿಯಾಂಗ್ ಪ್ರಾಂತ್ಯದಲ್ಲಿ ಆರ್ಥಿಕ ಅಭಿವೃದ್ದಿ ಉತ್ತೇಜಿಸುವುದು ಚೀನಾದ ಪ್ರಮುಖ ಗುರಿಯಾಗಿದೆ ಎಂದು  ಅವರು  ತಿಳಿಸಿದ್ದಾರೆ.

ಈ ಮಧ್ಯೆ  ಭಯೋತ್ಪಾದನೆ ಹಾಗೂ ಪ್ರತ್ಯೇಕತಾ ಶಕ್ತಿಗಳನ್ನು ನಿಯಂತ್ರಿಸಿ ಜನ ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಚೀನಾ ಆದ್ಯತೆ ನೀಡುತ್ತದೆ ಎಂದು ಹುವಾ ಚುನೈಯಿಂಗ್ ತಿಳಿಸಿದ್ದಾರೆ.

ಇತರ ಕಡೆಗಳಿಂದ ಬಂದಿರುವ  ಬಂದಿರುವ ಮುಸ್ಲಿಂರು ಝಿನ್ಜಿಯಾಂಗ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದು,  ಇಲ್ಲಿನ ಹಿಂಸಾಚಾರಕ್ಕೆ ಪ್ರತ್ಯೇಕ ಪೂರ್ವ  ತರ್ಕಿಸ್ತಾನ್ ಇಸ್ಲಾಂಮಿಕ್ ಮೂವ್ ಮೆಂಟ್   ಹಾಗೂ ಅಲ್ ಖೈದಾ ಸಂಘಟನೆ  ಕಾರಣವೆಂದು ಚೀನಾ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT