ಮಹಿಂದಾ ರಾಜಪಕ್ಸೆ 
ವಿದೇಶ

ಶ್ರೀಲಂಕಾ ಪ್ರಧಾನಮಂತ್ರಿ ಹುದ್ದೆಗೆ ರಾಜಪಕ್ಸೆ ರಾಜೀನಾಮೆ- ರಾಜಪಕ್ಸೆ ಪುತ್ರ ಹೇಳಿಕೆ

ಶ್ರೀಲಂಕಾದ ವಿವಾದಾತ್ಮಕ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದ ರಾಜಪಕ್ಸೆ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರ ಪುತ್ರ ಇಂದು ಹೇಳಿದ್ದಾರೆ.

ಕೊಲಂಬೊ: ಶ್ರೀಲಂಕಾದ ವಿವಾದಾತ್ಮಕ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದಾ ರಾಜಪಕ್ಸೆ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರ ಪುತ್ರ ಇಂದು ಹೇಳಿದ್ದಾರೆ.

ರಾಷ್ಟ್ರದ ಭದ್ರತೆ ದೃಷ್ಟಿಯಿದ  ಮಾಜಿ ಅಧ್ಯಕ್ಷ ರಾಜಪಕ್ಸ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ  ಎಂದು ರಾಜಪಕ್ಸ ಪುತ್ರ ನಾಮಲ್ ಟ್ವೀಟ್ ಮಾಡಿದ್ದಾರೆ.

ಶ್ರೀಲಂಕಾ ಪ್ರೀಡಂ ಪಾರ್ಟಿ ಮತ್ತಿತರರು ಶ್ರೀಲಂಕಾ ಅಧ್ಯಕ್ಷ ಸಿರಿಸೇನಾ ಅವರೊಂದಿಗೆ ವಿಶಾಲವಾದ ರಾಜಕೀಯ ಸಮನ್ವಯತೆ ಸಾಧಿಸುವ ನಿಟ್ಟಿನಲ್ಲಿ  ಮಹಿಂದಾ ರಾಜಪಕ್ಸ ಈಗ ಕೆಲಸ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ  ರಾಜಪಕ್ಸ ಅವರನ್ನು ಪ್ರಧಾನಿಯನ್ನಾಗಿ ನೇಮಿಸಿ, ಸಂಸತ್ ವಿಸರ್ಜಿಸಿರುವುದು ಅಕ್ರಮ ಎಂದು ಸುಪ್ರೀಂಕೋರ್ಟ್ ಹೇಳಿಕೆ ನೀಡಿದ ನಂತರ ರಾಜಪಕ್ಸ ಈ ನಿರ್ಧಾರ ಕೈಗೊಂಡಿದ್ದಾರೆ.

ರಾಜಪಕ್ಸ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಿಸುವಂತಿಲ್ಲ ಹಾಗೂ ಅವರ ಸಂಪುಟವು ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದ್ದು, ರಾಜಪಕ್ಸ ದಾಖಲಿಸಿರುವ ಅರ್ಜಿ ವಿಚಾರಣೆಯನ್ನು ಮುಂದಿನ ವರ್ಷದ ಜನವರಿ 16,17, 18 ರಂದು ನಡೆಸುವುದಾಗಿ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT