ಪಾಕ್ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

ಅಲ್ಪಸಂಖ್ಯಾತರನ್ನು ಹೇಗೆ ಕಾಣಬೇಕೆಂದು ನಾವು ಮೋದಿ ಸರ್ಕಾರಕ್ಕೆ ತೋರಿಸುತ್ತೇವೆ: ಇಮ್ರಾನ್ ಖಾನ್

ಬಾಲಿವುಡ್ ನಟ ನಾಸಿರುದ್ದೀನ್ ಶಾ ಭಾರತದಲ್ಲಿ ಹೆಚ್ಚುತ್ತಿರುವ ಗುಂಪು ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ "ಅಲ್ಪಸಂಖ್ಯಾತರನ್ನು ಹೇಗೆ ಕಾಣಬೇಕೆಂದು ನಾವು....

ಲಾಹೋರ್: ಬಾಲಿವುಡ್ ನಟ ನಾಸಿರುದ್ದೀನ್ ಶಾ ಭಾರತದಲ್ಲಿ ಹೆಚ್ಚುತ್ತಿರುವ ಗುಂಪು ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ "ಅಲ್ಪಸಂಖ್ಯಾತರನ್ನು ಹೇಗೆ ಕಾಣಬೇಕೆಂದು ನಾವು ಮೋದಿ ಸರ್ಕಾರಕ್ಕೆ ತೋರಿಸುತ್ತೇವೆ" ಎಂದಿದ್ದಾರೆ.
ಉತ್ತರ ಪ್ರದೇಶದ ಬುಲಂದರ್ ಶಹರ್ ಹಿಂಸಾಚಾರ ವೇಳೆ ಪೋಲೀಸ್ ಅಧಿಕಾರಿಯೊಬ್ಬರ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಭಾರತದಲ್ಲಿ ಗುಂಪು ದಾಳಿಗಳು ಹೆಚ್ಚುತ್ತಿದ್ದ ಬಗ್ಗೆ ಬಾಲಿವುಡ್ ನಟ ಶಾ ಕಳವಳ ವ್ಯಕ್ತಪಡಿಸಿದ್ದರು."ನನ್ನ ಮಕ್ಕಳನ್ನು ನಾನು ಯಾವುದೇ ನಿರ್ದಿಷ್ಟ ಧರ್ಮದ ಅನುಯಾಯಿಗಳನ್ನಾಗಿ ಬೆಳೆಸಿಲ್ಲ, ಅವರ ಬಗ್ಗೆ ನನಗೆ ಆತಂಕವಿದೆ" ಎಂದು ಶಾ ಹೇಳಿದ್ದರು
ಪಂಜಾಬ್ ಸರ್ಕಾರದ ನೂರು ದಿನಗಳ ಸಾಧನೆ ಕಾರ್ಯ್ಕರ್ಮ ಉದ್ಘಾಟಿಸಿ ಮಾತನಾಡಿದ ಇಮ್ರಾನ್ ಖಾನ್ ಪಾಕಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳನ್ನು ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತದೆ.ಇದು ದೇಶದ ಸ್ಥಾಪಕ ಮಹಮದ್ ಅಲಿ ಜಿನ್ನಾ ಅವರ ದೂರದರ್ಶಿತ್ವದ ನಿಲುವು ಎಂದಿದ್ದಾರೆ.
"ಆಧುನಿಕ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ, ಸಮಾನ ಹಕ್ಕುಗಳಿವೆ ಎನ್ನುವುದನ್ನು ನಮ್ಮ ಸರ್ಕಾರ ಖಚಿತಪಡಿಸುತ್ತದೆ. 
"ನಾವು ಅಲ್ಪಸಂಖ್ಯಾತರನ್ನು ಹೇಗೆ ಕಾಣಬೇಕೆಂದು ಮೋದಿ ಸರ್ಕಾರಕ್ಕೆ ತೋರಿಸಿಕೊಡಲಿದ್ದೇವೆ.ಆದರೆ ಭಾರತದಲ್ಲಿನ ಜನತೆ ಹೇಳುವಂತೆ ಅಲ್ಲಿ ಅಲ್ಪಸಂಖ್ಯಾತದಲ್ಲಿ ಸಮಾನ ನಾಗರಿಕರೆಂದು ಸಹ ಪರಿಗಣಿಸಲಾಗುವುದಿಲ್ಲ" ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT