ಪ್ರಧಾನಿ ಮೋದಿ ಹಾಗೂ ಬುರ್ಜ್ ಖಲೀಫಾ 
ವಿದೇಶ

ಯುಎಇಗೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ: ತ್ರಿವರ್ಣ ಧ್ವಜ ಬಣ್ಣಕ್ಕೆ ತಿರುಗಿದ ಬುರ್ಜ್ ಖಲೀಫಾ!

ಮೂರು ರಾಷ್ಟ್ರಗಳ ಭೇಟಿ ನಿಮಿತ್ತ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಯುಎಇಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ದುಬೈ ಆಕರ್ಷಣೀಯ ಕೇಂದ್ರ ಬಿಂದು ಬುರ್ಜ್ ಖಲೀಫಾ ತ್ರಿವರ್ಣ ಧ್ವಜ ಬಣ್ಣಕ್ಕೆ ತಿರುಗಿದೆ.

ಅಬುಧಾಬಿ: ಮೂರು ರಾಷ್ಟ್ರಗಳ ಭೇಟಿ ನಿಮಿತ್ತ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಯುಎಇಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ದುಬೈ ಆಕರ್ಷಣೀಯ ಕೇಂದ್ರ ಬಿಂದು ಬುರ್ಜ್ ಖಲೀಫಾ ತ್ರಿವರ್ಣ ಧ್ವಜ ಬಣ್ಣಕ್ಕೆ ತಿರುಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆಯುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ದುಬೈನ ಆಕರ್ಷಣೆಯ ಕೇಂದ್ರ ಬಿಂದು ಬುರ್ಜ್ ಖಲೀಫಾ ತ್ರಿವರ್ಣ ಧ್ವಜ  ಬಣ್ಣಕ್ಕೆ ತಿರುಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುಎಇ ಸ್ವಾಗತ ಕೋರಲು ಸಿದ್ಧವಾಗಿದೆ. 
ಇನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ತೆರಳಲಿದ್ದು, ಈ ವೇಳೆ ದುಬೈ ದೊರೆಗಳ ಭೇಟಿ ಮಾಡಲಿದ್ದಾರೆ. ಬಳಿಕ ದುಬೈ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಅವರು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.  ಅಂತೆಯೇ ದುಬೈನಲ್ಲಿರುವ ಭಾರತ ಮೂಲದ ನಿವಾಸಿಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿಲಿದ್ದು, ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ದುಬೈನ ಖ್ಯಾತನಾಮ ವಾಣಿಜ್ಯೋಧ್ಯಮಿಗಳೊಂದಿಗೆ ಪ್ರಧಾನಿ ಮೋದಿ ಸಭೆ  ನಡೆಸಲಿದ್ದು, ಭಾರತದಲ್ಲಿ ಹೂಡಿಕೆ ಮಾಡುವ ಸಂಬಂಧ ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ. 
ಬಳಿಕ ದುಬೈನಲ್ಲಿ ನಿರ್ಮಾಣವಾಗಿರುವ ಭವ್ಯ ಹಿಂದೂ ದೇಗುಲವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಈ ಉದ್ಘಾಟನಾ ಸಮಾರಂಭ ಭಾರತ ಮತ್ತು ದುಬೈನಲ್ಲಿ ನೇರ ಪ್ರಸಾರವಾಗುತ್ತಿರುವುದು ವಿಶೇಷವಾಗಿದೆ. ಉದ್ಘಾಟನೆ  ಬಳಿಕ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಇದಕ್ಕಾಗಿ ಒಪೆರಾ ಹೌಸ್ ಸಕಲ ರೀತಿಯಲ್ಲೂ ಸಜ್ಜಾಗಿದೆ. 
ಹಾಲಿ ಪ್ರವಾಸ ಯುಎಇಗೆ ಪ್ರಧಾನಿ ಮೋದಿ ಅವರ 2ನೇ ಭೇಟಿಯಾಗಿದ್ದು, ಈ ಹಿಂದೆ 2015ರಲ್ಲಿಯೂ ಪ್ರಧಾನಿ ಮೋದಿ ಯುಎಇಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT