ಸಂಗ್ರಹ ಚಿತ್ರ 
ವಿದೇಶ

ತಂತ್ರಜ್ಞಾನವನ್ನು ಅಭಿವೃದ್ಧಿಗೆ ಬಳಕೆ ಮಾಡಿ, ವಿನಾಶಕ್ಕಲ್ಲ: ಪ್ರಧಾನಿ ಮೋದಿ

ತಂತ್ರಜ್ಞಾನಗಳನ್ನು ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಬೇಕೇ ಹೊರತು ವಿನಾಶಕ್ಕಲ್ಲ ಎಂದು ಪ್ರಧಾನಿ ಮೋದಿ ದುಬೈ ನಲ್ಲಿ ಹೇಳಿದ್ದಾರೆ.

ಅಬುದಾಬಿ: ತಂತ್ರಜ್ಞಾನಗಳನ್ನು ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಬೇಕೇ ಹೊರತು ವಿನಾಶಕ್ಕಲ್ಲ ಎಂದು ಪ್ರಧಾನಿ ಮೋದಿ ದುಬೈ ನಲ್ಲಿ ಹೇಳಿದ್ದಾರೆ.
ಭಾನುವಾರ ಅಬುದಾಬಿಯಲ್ಲಿ ನಡೆದ ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಕೆಲ ರಾಷ್ಟ್ರಗಳ ತಂತ್ರಜ್ಞಾನ ಇರುವುದೇ ಮತ್ತೊಂದು ರಾಷ್ಟ್ರದ ವಿನಾಶಕ್ಕೆ ಎಂಬ ರೀತಿಯಲ್ಲಿ ವರ್ತಿಸುತ್ತಿವೆ.  ಆದರೆ ತಂತ್ರಜ್ಞಾನ ಅಭಿವೃದ್ಧಿಗೆ ಪೂರಕವಾಗಿರಬೇಕೇ ಹೊರತು ವಿನಾಶಕ್ಕಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಅಬುದಾಬಿಯಲ್ಲಿ ನಿರ್ಮಾಣವಾಗುತ್ತಿರುವ ಹಿಂದೂ ದೇಗುಲ ಉದ್ದೇಶಿಸಿ ಮಾತನಾಡಿದ ಮೋದಿ ಇದು ದುಬೈ 125  ಕೋಟಿ ಭಾರತೀಯರಿಗೆ ನೀಡುತ್ತಿರುವ ಗೌರವವಾಗಿದೆ. ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿರುವುದು ಖುಷಿ ಸಂಗತಿಯಾಗಿದೆ ಎಂದು ಹೇಳಿದರು.
ಅಂತೆಯೇ "ತಂತ್ರಜ್ಞಾನವನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡರೆ ಮರುಭೂಮಿಯನ್ನು ಬದಲಿಸಬಹುದು ಎಂಬುದಕ್ಕೆ ದುಬೈ ಅತ್ಯುತ್ತಮ ಉದಾಹರಣೆಯಾಗಿದ್ದು, ನಿಜಕ್ಕೂ ಇದು ಅಚ್ಚರಿಯ ಸಂಗತಿ, ತಂತ್ರಜ್ಞಾನ ಆಲೋಚನೆಗಳ  ವೇಗವನ್ನು ಹೆಚ್ಚಿಸುತ್ತಿದ್ದು, ಸಾಮಾನ್ಯನಿಗೂ ತಂತ್ರಜ್ಞಾನ ಕೆಲಸ ನೀಡುತ್ತಿದೆ. ತಂತ್ರಜ್ಞಾನ ಎಂದರೆ ಅಭಿವೃದ್ಧಿ ಎಂದು ಪರಿಗಣಿಸಬೇಕೇ ಹೊರತು ತಂತ್ರಜ್ಞಾನವನ್ನು ವಿನಾಶಕ್ಕೆ ಬಳಕೆ ಮಾಡಬಾರದು. ತಂತ್ರಜ್ಞಾನಕ್ಕೆ  ಸಂಬಂಧಿಸಿದಂತೆ ಜೀವವನದಲ್ಲಿ ಎಂದಿಗೂ ನಾವು 6 ಪ್ರಮುಖ ನಿಯಮಗಳನ್ನು ಪಾಲಿಸಬೇಕು. ಕಡಿಮೆ, ಮರುಬಳಕೆ, ಮರುಸೃಷ್ಟಿ, ಚೇತರಿಸಿಕೊಳ್ಳುವುದು, ಪುನರ್ವಿನ್ಯಾಸ ಮಾಡು ಮತ್ತು ಪುನಃ ತಯಾರಿಸುವುದು ಎಂಬುದು ಈ  ಆರು ನಿಯಮಗಳು.  
ಅಭಿವೃದ್ಧಿ ಹೊರತಾಗಿಯೂ ವಿಶ್ವದಲ್ಲಿ ಬಡತನ, ಅಪೌಷ್ಟಿಕತೆಯನ್ನು ನಾವು ಸಂಪೂರ್ಣವಾಗಿ ತೊಡೆದು ಹಾಕಲಾಗಿಲ್ಲ. ಇದರ ನಡುವೆಯೇ ನಾವು ಬಹುತೇಕ ಹಣ ಮತ್ತು ಸಮಯವನ್ನು ಕ್ಷಿಪಣಿ ಮತ್ತು ಬಾಂಬ್ ಗಳ ತಯಾರಿಕೆಗೆ  ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮೋದಿ ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5,000 ಕೊಟ್ಟರೂ ತಗೋಳಿ, ಆದರೆ ಅವರಿಗೆ ಶಿಳ್ಳೆ ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ

ಚುನಾವಣೆ ಹೊಸ್ತಿಲಲ್ಲೇ TN ಮಹಿಳೆಯರಿಗೆ ಬಂಪರ್: 1.31 ಕೋಟಿ ಖಾತೆಗಳಿಗೆ 5 ಸಾವಿರ ಜಮೆ; ಮತ್ತೆ ಅಧಿಕಾರಕ್ಕೆ ಬಂದರೆ 2 ಸಾವಿರ - ಸಿಎಂ ಸ್ಟಾಲಿನ್

ನೆಹರು ಯಾಕೆ ಚೀನಾದೊಂದಿಗೆ 'ಪಂಚಶೀಲ' ಒಪ್ಪಂದ ಮಾಡಿಕೊಂಡ್ರು ಗೊತ್ತಾ? CDS ಅನಿಲ್ ಚೌಹಾಣ್ ಹೇಳಿದ್ದು ಹೀಗೆ..

T20 World Cup 2026: ಭಾರತ vs ಪಾಕಿಸ್ತಾನ ಹೈ ವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ?; ಎಚ್ಚರಿಕೆ ಕೊಟ್ಟ ಶ್ರೀಲಂಕಾ ಹವಾಮಾನ ಇಲಾಖೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳಿಗಷ್ಟೇ ತಾತ್ವಿಕ ಒಪ್ಪಿಗೆ, ಸಂಭ್ರಮಾಚರಣೆಗೆ ಬ್ರೇಕ್?: ಪರಮೇಶ್ವರ ಹೇಳಿದ್ದೇನು?

SCROLL FOR NEXT