ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ (ಸಂಗ್ರಹ ಚಿತ್ರ) 
ವಿದೇಶ

ಭ್ರಷ್ಟಾಚಾರ ಆರೋಪ: ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ ರಾಜಿನಾಮೆ

ಗಂಭೀರ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ ಅವರು ತತ್ ಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಸ್ಥಾನಕ್ಕೆ ಗುರುವಾರ ರಾಜಿನಾಮೆ ನೀಡಿದ್ದಾರೆ.

ಜೋಹಾನ್ಸ್‌ಬರ್ಗ್‌: ಗಂಭೀರ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ ಅವರು ತತ್ ಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಸ್ಥಾನಕ್ಕೆ ಗುರುವಾರ ರಾಜಿನಾಮೆ ನೀಡಿದ್ದಾರೆ.
ಎಎನ್ ಸಿ ಪಕ್ಷದಿಂದ ಜೇಕಬ್ ಜುಮಾ ಅವರನ್ನು ಉಚ್ಛಾಟನೆ ಮಾಡಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಅವರನ್ನು ಅಧ್ಯಕ್ಷ ಗಾದಿಯಿಂದ ಕೆಳಗಿಳಿಸುವ ಕುರಿತು ಪಕ್ಷ ನಿರ್ಧಾರ ಕೈಗೊಂಡ ಬೆನ್ನಲ್ಲೇ ತಮ್ಮ ಹಠವನ್ನು ಕೈ  ಬಿಟ್ಟಿರುವ ಜುಮಾ ಇದೀಗ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸತತ 9 ವರ್ಷಗಳ ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಜೇಕಬ್ ಜುಮಾ ಅವರ ಖ್ಯಾತಿ ಕುಂದುತ್ತಾ ಬಂದಿತ್ತು. ಅಲ್ಲದೆ ತಮ್ಮದೇ ಸ್ವಪಕ್ಷೀಯರಿಂದಲೇ ಜುಮಾ ತೀವ್ರ ವಿರೋಧ ಎದುರಿಸಿತ್ತಿದ್ದರು.  ಇತ್ತೀಚೆಗಷ್ಟೇ ಜುಮಾ ಅವರನ್ನು ಎಎನ್ ಸಿ ಪಕ್ಷದಿಂದ ವಜಾ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೂ ಮೊದಲು ರಾಜೀನಾಮೆ ನೀಡುವಂತೆ ಪಕ್ಷ ಮಾಡಿದ್ದ ಮನವಿಯನ್ನು ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರೊಂದಿಗೆ  ಮಾತುಕತೆ ಮುಕ್ತಾಯಗೊಳಿಸಿದ್ದ ಎಎನ್ ಸಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲು ನಿರ್ಧರಿಸಿತ್ತು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ 107 ಸದಸ್ಯರು ಸುದೀರ್ಘ ಅವಧಿಯ ಸಭೆ ನಡೆಸಿ ಅಧ್ಯಕ್ಷರನ್ನು  ವಜಾಗೊಳಿಸುವ ತೀರ್ಮಾನಕ್ಕೆ ಬಂದಿದ್ದರು ಎನ್ನಲಾಗಿತ್ತು. 
ಇದೀಗ ಪಕ್ಷದ ಒತ್ತಾಯಕ್ಕೆ ಮಣಿದಿರುವ ಜೇಕಬ್ ಜುಮಾ ಅಂತಿಮವಾಗಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 
ಜುಮಾ ಅವರ ಮೇಲೆ ಭ್ರಷ್ಟಾಚಾರದ ಆರೋಪವಿದೆ. ಅವರ ಅಧ್ಯಕ್ಷತೆಯಲ್ಲಿ ದೇಶದ ಆರ್ಥಿಕತೆ ವೇಗ ಕಳೆದುಕೊಂಡಿದೆ. ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆಕ್ರೋಶ ಸಾರ್ವಜನಿಕರಲ್ಲಿದೆ. 2009ರಿಂದ ಎರಡು ಅವಧಿಗೆ  ಅವರು ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

SSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Resultಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್, 6 ಮಂದಿ ಬಂಧನ..!

'ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷದವರು ಸುಳ್ಳು ಹೇಳುತ್ತಿದ್ದಾರೆ; 592 ಚುನಾವಣಾ ಭರವಸೆಗಳಲ್ಲಿ 243ನ್ನು ಕಾಂಗ್ರೆಸ್ ಈಡೇರಿಸಿದೆ': ಸಿದ್ದರಾಮಯ್ಯ

ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಿಲ್ಲದ ದೌರ್ಜನ್ಯ: ಆಟೋ ಚಾಲಕನ ಬರ್ಬರ ಹತ್ಯೆ

SCROLL FOR NEXT