ಐವರು ಭಾರತೀಯ ಯೋಧರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ನೀಡಿರುವ ಚಿತ್ರ 
ವಿದೇಶ

ಸೇನಾ ನೆಲೆ ಧ್ವಂಸಗೊಳಿಸಿ ಐವರು ಭಾರತೀಯ ಯೋಧರ ಹತ್ಯೆ : ಪಾಕಿಸ್ತಾನ ಹೇಳಿಕೆ

ಅಂತಾರಾಷ್ಟ್ರೀಯ ಗಡಿ ರೇಖೆ ತಟ್ಟಪಾಣಿ ವಲಯದಲ್ಲಿ ಭಾರತೀಯ ಸೇನಾ ನೆಲೆಯನ್ನು ಧ್ವಂಸಗೊಳಿಸಿ ಐವರು ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಹೇಳಿದೆ.

 ಇಸ್ಲಾಮಾಬಾದ್ : ಅಂತಾರಾಷ್ಟ್ರೀಯ ಗಡಿ ರೇಖೆ ತಟ್ಟಪಾಣಿ ವಲಯದಲ್ಲಿ ಭಾರತೀಯ ಸೇನಾ ನೆಲೆಯನ್ನು ಧ್ವಂಸಗೊಳಿಸಿ ಐವರು ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಹೇಳಿದೆ.

ಭಾರತೀಯ ಸೇನೆ ಕಡೆಯಿಂದ ಬಾಂಬು ದಾಳಿ ನಡೆಸುತ್ತಿರುವಂತಹ ವಿಡಿಯೋವೊಂದನ್ನು ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಅಸಿಪ್ ಘಪೊರ್  ಟ್ವಿಟ್  ಮಾಡಿದ್ದಾನೆ.

 ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ಮುಗ್ದ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಭಾರತೀಯ ಸೇನಾ ನೆಲೆಯನ್ನು ಧ್ವಂಸಗೊಳಿಸಲಾಗಿದೆ. ಐವರು ಭಾರತೀಯ ಯೋಧರನ್ನು ಹತ್ಯೆಗೈಯಲಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಮುಗ್ದ ಜನರ ಭಾರತ ದಾಳಿ ನಡೆಸುತ್ತಿದ್ದು, ಕೂಡಲೇ ಪ್ರತಿಕ್ರಿಯಿಸಬೇಕೆಂದು ಘಪೊರ್  ಹೇಳಿಕೆ ನೀಡಿದ್ದಾನೆ.

ಇದನ್ನು  ಭಾರತೀಯ ಸೇನಾ ಅಧಿಕಾರಿಗಳು ನಿರಾಕರಿಸಿದ್ದಾರೆ. ಪಾಕಿಸ್ತಾನ ನೀಡಿರುವ ಹೇಳಿಕೆ  ಆಧಾರರಹಿತವಾದದ್ದು ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ  ಅಪ್ರಚೋದಿಕತ ಗುಂಡಿನ ದಾಳಿಯನ್ನು ಖಂಡಿಸಿ ಭಾರತದ ಹೈ ಕಮಿಷನರ್ ಗೆ ಪಾಕಿಸ್ತಾನ ನಿನ್ನೆ ನೋಟಿಸ್ ಜಾರಿಗೊಳಿಸಿದೆ. ಭಟ್ಟಳ್- ಮದಾರ್ ಪುರ ರಸ್ತೆಯಲ್ಲಿ ಶಾಲಾ  ವ್ಯಾನಿನ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು,  ವ್ಯಾನಿನ ಚಾಲಕ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನ ಆರೋಪಿಸಿತ್ತು.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT