ಸಂಗ್ರಹ ಚಿತ್ರ 
ವಿದೇಶ

ಹಫೀಜ್ ಸಯ್ಯೀದ್, ಅಜರ್ ಮಸೂದ್ ರಂತಹವರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದರೆ 10 ವರ್ಷ ಜೈಲು: ಪಾಕಿಸ್ತಾನ

ಪಾಕಿಸ್ತಾನ ಇದೀಗ ಹಫೀಜ್ ಸಯ್ಯೀದ್, ಅಜರ್ ಮಸೂದ್ ರಂತಹವರ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದರೆ 10 ವರ್ಷ ಜೈಲು ಶಿಕ್ಷೆ ನೀಡುವುದಾಗಿ ಎಚ್ಚರಿಕೆ ನೀಡಿದೆ.

ಇಸ್ಲಾಮಾಬಾದ್: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆಯಂತೆ ಅಮೆರಿಕ ಸರ್ಕಾರದಿಂದ ಛೀಮಾರಿ ಹಾಕಿಸಿಕೊಂಡು ಆರ್ಥಿತ ಮತ್ತು ಭದ್ರತಾ ನೆರವು ಅಮಾನತು ಮಾಡಿಸಿಕೊಂಡಿರುವ ಪಾಕಿಸ್ತಾನ ಇದೀಗ ಹಫೀಜ್ ಸಯ್ಯೀದ್,  ಅಜರ್ ಮಸೂದ್ ರಂತಹವರ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದರೆ 10 ವರ್ಷ ಜೈಲು ಶಿಕ್ಷೆ ನೀಡುವುದಾಗಿ ಎಚ್ಚರಿಕೆ ನೀಡಿದೆ.
ಇತ್ತೀಚೆಗಷ್ಟೇ ಪಾಕಿಸ್ತಾನದ ಉಗ್ರಪರ ನಿಲುವುಗಳಿಗೆ ಆಕ್ರೋಶ ವ್ಯಕ್ತಪಡಿಸಿದ್ದ ಅಮೆರಿಕ ತನ್ನ ಆರ್ಥಿಕ ಮತ್ತು ಭದ್ರತಾ ನೆರವನ್ನು ಸ್ಥಗಿತಗೊಳಿಸಿತ್ತು. ಅಲ್ಲದೆ ಮುಂದಿನ ದಿನಗಳಲ್ಲಿ ಪಾಕ್ ಸರ್ಕಾರ ಉಗ್ರರ ವಿರುದ್ಧ ಕ್ರಮ  ಕೈಗೊಳ್ಳದಿದ್ದರೆ ಮತ್ತಷ್ಟು ಕಠಿಣ ನಿಲುವು ತಳೆಯುವುದಾಗಿ ಎಚ್ಚರಿಕೆ ನೀಡಿತ್ತು. ಅಮೆರಿಕ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ ನಿನ್ನೆಯಷ್ಟೇ ಹಫೀಜ್ ಸಯ್ಯೀದ್, ಅಜರ್ ಮಸೂದ್ ಅವರ ಸಂಘಟನೆಗಳು  ಸೇರಿದಂತೆ ಒಟ್ಟು 72 ಉಗ್ರ ಸಂಘಟನೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಆದೇಶ ಹೊರಡಿಸಿತ್ತು.
ಇದರ ಬೆನ್ನಲ್ಲೇ ಇಂದು ಅದರ ಮುಂದುವರಿದ ಭಾಗ ಎಂಬಂತೆ ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಉಗ್ರ ಸಂಘಟನೆಗಳಿಗೆ ಆರ್ಥಿಕ  ನೆರವು ನೀಡುವವರಿಗೆ 10 ವರ್ಷ ಜೈಲು ಮತ್ತು 10 ಮಿಲಿಯನ್ ಹಣವನ್ನು ದಂಡವಾಗಿ ವಿಧಿಸುತ್ತೇನೆ ಎಂದು ಎಚ್ಚರಿಕೆ ನೀಡಿದೆ.
ಇನ್ನು ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕ್ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿದ ಬೆನ್ನಲ್ಲೇ, ಪಾಕಿಸ್ತಾನದ ವಿರುದ್ಧ ಕೆಂಡಕಾರಿರುವ ಅಮೆರಿಕ ಸರ್ಕಾರ, ಉಗ್ರ ಸಂಘಟನೆಗಳನ್ನು ನಾಶ ಮಾಡಿ ಎಂದು ಖಡಕ್  ಎಚ್ಚರಿಕೆ ನೀಡಿದೆ. ತಾಲಿಬಾನ್‌ ಮತ್ತು ಹಖ್ಖಾನಿ ಉಗ್ರ ಜಾಲವನ್ನು ನಿರ್ನಾಮ ಮಾಡಬೇಕೆಂದು ಪಾಕಿಸ್ಥಾನಕ್ಕೆ ಮನವರಿಕೆ ಮಾಡವಲ್ಲಿನ ಕ್ರಮವಾಗಿ ಭದ್ರತಾ ನೆರವನ್ನು ನಿಲ್ಲಿಸುವ ಮಾರ್ಗವಲ್ಲದೆ ಬೇರೆ ಉಪಾಯಗಳೂ ತಮ್ಮಲ್ಲಿ  ಇವೆ ಎಂದು ಅಮೆರಿಕ ಸ್ಪಷ್ಟಪಡಿಸಿತ್ತು. ಭವಿಷ್ಯದಲ್ಲಿ ಪಾಕಿಸ್ತಾನದ ನಡೆಯನ್ನು ಗಮನಿಸಿ ಅದರ ಆಧಾರದ ಮೇಲೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT