ಸಂಗ್ರಹ ಚಿತ್ರ 
ವಿದೇಶ

ವಿವಿಐಪಿ ಚಾಪರ್ ಹಗರಣ; ಇಟಲಿ ಕೋರ್ಟ್ ನಿಂದ ಪ್ರಮುಖ ಆರೋಪಿಗಳ ಖುಲಾಸೆ!

ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ಇಟಲಿ ನ್ಯಾಯಾಲಯ ಹಗರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ನವದೆಹಲಿ: ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ಇಟಲಿ ನ್ಯಾಯಾಲಯ ಹಗರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಮೂಲಗಳ ಪ್ರಕಾರ ಹಗರಣದ ಪ್ರಮುಖ ಆರೋಪಿಯಾದ ಫಿನ್ ಮೆಕಾನಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಗಿಸೆಪ್ಪೆ ಓರ್ಸಿ ಮತ್ತು ಅಗಸ್ಟಾ ವೆಸ್ಟ್ ಲ್ಯಾಂಡ್ ಸಂಸ್ಥೆಯ ಸಹಾಯಕ ನಿರ್ದೇಶಕ ಬ್ರುನೋ ಸ್ಪಾಗ್ನಲೋನಿ ಅವರನ್ನು ಇಟಲಿ  ನ್ಯಾಯಾಲಯ ಖುಲಾಸೆಗೊಳಿಸಿದೆ. ಅಂತಾರಾಷ್ಟ್ರೀಯ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಇಟಲಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಸಾಕ್ಷ್ಯಾಧಾರ ಕೊರತೆಯಿಂದಾಗಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ  ಎಂದು ಹೇಳಲಾಗುತ್ತಿದೆ. ಭಾರತಕ್ಕೆ 12 ವಿವಿಐಪಿ ಹೆಲಿಕಾಪ್ಟರ್ ಮಾರಾಟ ಸಂಬಂಧ ಫಿನ್ ಮೆಕಾನಿಕಾ ಮತ್ತು ಅಗಸ್ಟಾ ವೆಸ್ಟ್ ಲ್ಯಾಂಡ್ ಸಂಸ್ಥೆಯ ಅಧಿಕಾರಿಗಳು ಭಾರತೀಯ ನೌಕಾಪಡೆ ಅಧಿಕಾರಿಗಳಿಗೆ ಬಹುಕೋಟಿ ಕಿಕ್ ಬ್ಯಾಕ್  ನೀಡಿದ್ದರು ಎಂಬ ಗಂಭೀರ ಆರೋಪವಿದೆ. 
ಈ ಸಂಬಂಧ 2016ರಲ್ಲಿ ಮಿಲಾನ್ ನಲ್ಲಿ ಇಟಲಿ ನ್ಯಾಯಾಲಯ ಆರೋಪಿಗಳ ವಿರುದ್ಧ ತನಿಖೆ ಘೋಷಣೆ ಮಾಡಿತ್ತು. ಇದೀಗ ಈ ಹಗರಣದ ಇಬ್ಬರು ಪ್ರಮುಖ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದು, ಪ್ರಕರಣ  ಸಂಬಂಧ ಆರೋಪಿಗಳ ಮೇಲೆ ಹೊರಿಸಲಾಗಿದ್ದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ. ಆರೋಪಗಳನ್ನು ಸಾಬೀತು ಪಡಿಸುವ ಪ್ರಬಲ ಸಾಕ್ಷ್ಯಗಳಿಲ್ಲ ಎಂದು ಹೇಳಿ ಖುಲಾಸೆಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT