ಜಾಗತಿಕ ಸಿಇಒಗಳ ಜತೆಗಿನ ಸಭೆಯಲ್ಲಿ ನರೇಂದ್ರ ಮೋದಿ 
ವಿದೇಶ

ಭಾರತ ಎಂದರೆ ವ್ಯಾಪಾರ, ವ್ಯವಹಾರ: ಜಾಗತಿಕ ಸಿಇಒ'ಗಳಿಗೆ ಪ್ರಧಾನಿ ಮೋದಿ

ಭಾರತ ಎಂದರೆ ವ್ಯವಹಾರ. ಜಾಗತಿಕ ವ್ಯವಹಾರಗಳಿಗೆ ಒಂದು ಉತ್ತೇಜಕ ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಸಿಇಒಗಳಿಗೆ ತಿಳಿಸಿದ್ದಾರೆ...

ದಾವೋಸ್: ಭಾರತ ಎಂದರೆ ವ್ಯವಹಾರ. ಜಾಗತಿಕ ವ್ಯವಹಾರಗಳಿಗೆ ಒಂದು ಉತ್ತೇಜಕ ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಸಿಇಒಗಳಿಗೆ ತಿಳಿಸಿದ್ದಾರೆ. 
ಸ್ವಿಡ್ಜರ್ ಲ್ಯಾಂಡಿನಲ್ಲಿ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗವಹಿಸಿರುವ ಪ್ರಧಾನಿ ಪ್ರಧಾನಿ ಮೋದಿ ಅವರು ಕೆಲ ಜಾಗತಿಕ ಸಿಇಒಗಳೊಂದಿಗೆ ಚರ್ಚಿಸಿದರು. ಈ ವೇಳೆ ಮೇಕ್ ಇನ್ ಇಂಡಿಯಾ ಬಗ್ಗೆ ಪ್ರಸ್ತಾಪಿಸಿದ ಅವರು ಭಾರತದಲ್ಲಿ ಹೂಡಿಕೆ ಮಾಡಲು ಇದು ಒಂದು ಸುವರ್ಣವಕಾಶ ಎಂದರು. 
ಭಾರತ ಎಂದರೆ ವ್ಯವಹಾರ ಎಂಬ ಅಡಿಬರಹದಲ್ಲಿ ಜಾಗತಿಕ ಕಂಪನಿಗಳ 40 ಸಿಇಒಗಳು ಈ ಚರ್ಚೆಯಲ್ಲಿ ಭಾಗವಹಿಸಿದ್ದರು. ಇದೇ ಸಭೆಯಲ್ಲಿ ಸರ್ಕಾರದ ಉನ್ನತ ಅಧಿಕಾರಿಗಳಾದ ವಿಜಯ್ ಗೋಯಾಲ್, ಜೈಶಂಕರ್ ಮತ್ತು ರಮೇಶ್ ಅಭಿಶೇಕ್ ಇದ್ದರು. 
ಸಭೆ ಬಳಿಕ ವಿದೇಶಾಂಗ ಸಚಿವಾಲಯದ ವಕ್ತಾರ ರಮೇಶ್ ಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿ ಭಾರತದ ಅಭಿವೃದ್ಧಿಯ ಕಥೆ ಮತ್ತು ಜಾಗತಿಕ ವ್ಯಾಪಾರಕ್ಕಾಗಿ ಅತ್ಯಾಕರ್ಷಕ ಅವಕಾಶಗಳನ್ನು ಪ್ರಸ್ತುತಪಡಿಸಿದರು ಎಂದು ಟ್ವೀಟಿಸಿದ್ದಾರೆ. 
ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ದಾವೋಸ್ ಪ್ರಯಾಣ ಬೆಳೆಸಿದ್ದರು. 20 ವರ್ಷಗಳ ಬಳಿಕ ಭಾರತ ಪ್ರಧಾನಿಯೊಬ್ಬರು ದಾವೋಸ್ ಶೃಂಗದಲ್ಲಿ ಭಾಗವಹಿಸುತ್ತಿರುವುದು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT