ಸಂಗ್ರಹ ಚಿತ್ರ 
ವಿದೇಶ

ಡಲ್ಲಾಸ್‌ನಲ್ಲಿ ತೆಲಂಗಾಣ ಮೂಲದ ಟೆಕ್ಕಿ ಮೃತದೇಹ ಪತ್ತೆ!

ಡಲ್ಲಾಸ್ ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಟೆಕ್ಕಿಯೊರ್ವನ ಮೃತದೇಹ ಆತನ ಕೋಣೆಯಲ್ಲಿ ಪತ್ತೆಯಾಗಿದೆ...

ಹೈದರಾಬಾದ್: ಡಲ್ಲಾಸ್ ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಟೆಕ್ಕಿಯೊರ್ವನ ಮೃತದೇಹ ಆತನ ಕೋಣೆಯಲ್ಲಿ ಪತ್ತೆಯಾಗಿದೆ. 
ವಿ ಶ್ರೀನಿವಾಸ್ ಚಾರಿ ಎಂಬುವರ ಪುತ್ರ ವಿ ಕೃಷ್ಣ ಚೈತನ್ಯ ಮೃತ ದುರ್ದೈವಿ. ಆತನ ಮೃತದೇಹ ಆತನ ಕೋಣೆಯಲ್ಲಿ ಪತ್ತೆಯಾಗಿದ್ದು ಕೃಷ್ಣ ಚೈತನ್ಯ ಸಾವಿನ ಕುರಿತು ಅನುಮಾನಗಳು ಮೂಡಿವೆ. 
ಹೈದರಾಬಾದ್ ನ ಸಿದ್ಧಿಪೇಟೆಯ ಪ್ರಶಾಂತ್ ನಗರದ ನಿವಾಸಿಯಾಗಿದ್ದ ಕೃಷ್ಣ ಚೈತನ್ಯ ಮೂರುವರೆ ವರ್ಷದ ಹಿಂದೆ ಕೆಲಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಕಾಂಗಿಝೇಂಟ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚೈತನ್ಯ ಪಶ್ಚಿಮ ಡಲ್ಲಾಸ್ ನಲ್ಲಿ ಪಿಜಿಯೊಂದರಲ್ಲಿ ವಾಸವಾಗಿದ್ದರು. 
ಜನವರಿ 25ರಿಂದ ಚೈತನ್ಯ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಪಿಜಿ ಮಾಲೀಕ ದೂರು ನೀಡಿದ್ದರು. ಅಂತೆ ಕೋಣೆಯ ಬಾಗಿಲನ್ನು ಒಡೆದು ನೋಡಿದಾಗ ಕೃಷ್ಣ ಚೈತನ್ಯ ಮೃತದೇಹ ಪತ್ತೆಯಾಗಿದೆ. ನಂತರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಚೈತನ್ಯ ಸಾವಿನ ಸುದ್ದಿ ತಿಳಿದ ಪೋಷಕರು ಸಚಿವ ಟಿ ಹರೀಶ್ ರಾವ್ ಅವರಿಗೆ ಮನವಿ ಮಾಡಿ ಪುತ್ರನ ಮೃತದೇಹವನ್ನು ಸ್ವದೇಶಕ್ಕೆ ತರುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT