ನರೇಂದ್ರ ಮೋದಿ 
ವಿದೇಶ

ಪ್ರಸಿದ್ಧ ರಾಮಾಲ್ಲಾಗೆ ಪ್ರಧಾನಿ ಮೋದಿ ಐತಿಹಾಸಿಕ ಭೇಟಿ ನಿರೀಕ್ಷೆಯಲ್ಲಿ ಪ್ಯಾಲೆಸ್ಟೀನಿಯರು!

ಭಾರತವು ಉದಯಿಸುತ್ತಿರುವ ಆರ್ಥಿಕ ಶಕ್ತಿ ಎಂದು ಹೇಳಿರುವ ಪ್ಯಾಲೆಸ್ಟೀನ್ ನ ಅಧಿಕಾರಿ, ಮುಂದಿನ ತಿಂಗಳ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ಟೀನ್ ಭೇಟಿಯಿಂದ...

ನವದೆಹಲಿ: ಭಾರತವು ಉದಯಿಸುತ್ತಿರುವ ಆರ್ಥಿಕ ಶಕ್ತಿ ಎಂದು ಹೇಳಿರುವ ಪ್ಯಾಲೆಸ್ಟೀನ್ ನ ಅಧಿಕಾರಿ, ಮುಂದಿನ ತಿಂಗಳ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ಟೀನ್ ಭೇಟಿಯಿಂದ ಎರಡೂ ಕಡೆಗಳ ನಡುವೆ ಆರ್ಥಿಕ ಬಾಂಧವ್ಯ ವೃದ್ಧಿಯಾಗಲಿದೆ ಎಂದರು. 
ಫೆಬ್ರವರಿ 10ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ಟೀನ್, ಯುಎಇ ಮತ್ತು ಒಮನ್ ತ್ರಿರಾಷ್ಟ್ರಗಳಿ ಭೇಟಿ ನೀಡುತ್ತಿದ್ದು ಈ ಮಧ್ಯೆ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವಣ ಸಂಘರ್ಷಕ್ಕೆ ಕಾರಣವಾಗಿರುವ ಪ್ರಸಿದ್ಧ ರಾಮಾಲ್ಲಾಗೆ ಭೇಟಿ ನೀಡುತ್ತಿದ್ದು ಇದು ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. 
ಇದೊಂದು ಐತಿಹಾಸಿಕ ಭೇಟಿಯಾಗಲಿದ್ದು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ವೃದ್ಧಿಸಲಿವೆ ಎಂಬ ಭರವಸೆ ಇದೆ ಎಂದು ಪ್ಯಾಲೆಸ್ಟೀನ್ ಅಧ್ಯಕ್ಷ ಮೊಹಮ್ಮುದ್ ಅಬ್ಬಾಸ್ ರಾಜತಾಂತ್ರಿಕ ಸಲಹೆಗಾರ ಡಾ. ಮಜೀದ್ ಖಾಲ್ದಿ ಅವರು ಹೇಳಿದ್ದಾರೆ. 
ಸಾಂಪ್ರದಾಯಿಕವಾಗಿ, ನಾವು ಭಾರತದಿಂದ ಬಲವಾದ ರಾಜಕೀಯ ಬೆಂಬಲವನ್ನು ಪಡೆದಿದ್ದೇವೆ ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಾಲ್ಲಾಗೆ ಭೇಟಿ ನೀಡಿದರೆ ಆಗ ನಮ್ಮ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ದೃಷ್ಟಿಯಿಂದ ನಾವು ನೋಡುತ್ತೇವೆ ಎಂದರು. 
ಪ್ರಸ್ತುತ ಭಾರತ ಪ್ರಬಲ ಆರ್ಥಿಕ ಶಕ್ತಿಯಾಗಿದೆ. ಹೆಚ್ಚುತ್ತಿರುವ ಆರ್ಥಿಕ ಮಹಾಶಕ್ತಿಯಿಂದಾಗಿ ಪ್ರತಿಯೊಬ್ಬರೂ ಭಾರತದ ಜತೆ ಸೇರಿಕೊಳ್ಳಲು ಯೋಜಿಸುತ್ತಿದ್ದಾರೆ. ಈಗಿನ ಉತ್ತಮ ಸಂಬಂಧಗಳನ್ನು ಮೀರಿ ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ನಾವು ಭರವಸೆ ಹೊಂದಿದ್ದೇವೆ ಎಂದು ಮಜೀದ್ ಖಾಲ್ದಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT