ಇಂದೋನೇಷಿಯಾ: ಚಂಡಮಾರುತಕ್ಕೆ ಸಿಕ್ಕ ಪ್ರಯಾಣಿಕರ ಹಡಗು ಮುಳುಗಡೆ, 31 ಸಾವು 
ವಿದೇಶ

ಇಂಡೋನೇಷಿಯಾ: ಚಂಡಮಾರುತಕ್ಕೆ ಸಿಕ್ಕ ಪ್ರಯಾಣಿಕರ ಹಡಗು ಮುಳುಗಡೆ, 31 ಸಾವು

ಪ್ರಯಾಣಿಕರ ಹಡಗು ಮುಳುಗಿದ ಪರಿಣಾಮ ೩೧ ಮಂದಿ ದಾರುಣ ಸಾವಿಗೀಡಾದ ಘಟನೆ ಇಂಡೋನೇಷಿಯಾದ ಸುಲಾವೆಸಿ ದ್ವೀಪದಲ್ಲಿ ನಡೆದಿದೆ.

ಜಕಾರ್ತಾ(ಇಂಡೋನೇಷಿಯಾ): ಪ್ರಯಾಣಿಕರ ಹಡಗು ಮುಳುಗಿದ ಪರಿಣಾಮ 31 ಮಂದಿ ದಾರುಣ ಸಾವಿಗೀಡಾದ ಘಟನೆ ಇಂಡೋನೇಷಿಯಾದ ಸುಲಾವೆಸಿ ದ್ವೀಪದಲ್ಲಿ ನಡೆದಿದೆ.

ಚಂಡಮಾರುತದ ಕಾರಣ ಹಡಗು ಮುಳುಗಲು ಪ್ರಾರಂಭಗೊಂಡ ತಕ್ಷಣ ಎಚ್ಚೆತ್ತುಕೊಂಡ ನಾವಿಕ ಸಮಯ ಪ್ರಜ್ಞೆ ಮೆರೆದಿದ್ದಾನೆ. ಆತ ಹಡಗನ್ನು ಹತ್ತಿರದ ದ್ವೀಪದತ್ತ ನಡೆಸಿದ್ದಾನೆ. ಇದರಿಂದ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಗೆ ನೆರವಾಗಿದ್ದು ಹಲವು ಪ್ರಯಾಣಿಕರ ಜೀವ ಉಳಿದಿದೆ.

ಮುಳುಗಿದ ಹಡಗಿನಲ್ಲಿ ಸಿಬ್ಬಂದಿಯೂ ಸೇರಿ 164 ಮಂದಿ ಇದ್ದರು.ಎಂದು ರಾಷ್ಟ್ರೀಯ ರಕ್ಷಣಾ ಪಡೆ ಅಧಿಕಾರಿಗಳು ಹೇಳಿದ್ದಾರೆ. ಇದುವರೆಗೆ 130 ಮಂದಿಯನ್ನು ರಕ್ಷಿಸಲಾಗಿದ್ದು ಮೂವರು ನಾಪತ್ತೆಯಾಗಿದ್ದಾರೆ ಎಂದು ಇಂಡೋನೇಷಿಯಾ ಸಾರಿಗೆ ಸಚಿವಾಲಯ ಹೇಳಿದೆ.

ಮುಳುಗಿದ ಹಡಗಿನಲ್ಲಿ ಕೇವಲ ಪ್ರಯಾಣಿಕರಷ್ಟೇ ಅಲ್ಲದೆ 48 ವಾಹನಗಳೂ ಇದ್ದವು ಎನ್ನಲಾಗಿದ್ದು ದುರಂತದಲ್ಲಿ ಅಪಾರ ಪ್ರಮಾಣ ಸಂಪತ್ತು ಸಹ ನಷ್ಟವಾಗಿದೆ.

ಇಂಡೋನೇಷಿಯಾದಲ್ಲಿ ಈ ಒಂದು ತಿಂಗಳಿನಲ್ಲಿ ಸಂಭವಿಸಿದ ಎರಡನೇ ಹಡಗು ದುರಂತ ಇದಾಗಿದೆ. ಕಳೆದ ಎರಡು ವಾರಗಳ ಹಿಂದೆ ಸುಮಾತ್ರ ದ್ವೀಪದ ಬಳಿ ನಡೆದ ಹಡಗು ದುರಂತದಲ್ಲಿ 200ಕ್ಕೆ ಹೆಚ್ಚಿನ ಜನ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT