ರಕ್ಷಣಾ ಕಾರ್ಯಾಚರಣೆ 
ವಿದೇಶ

ಥಾಯ್ಲೆಂಡ್ ಗುಹೆಯಲ್ಲಿ ಸಿಲುಕಿದ ಒಟ್ಟು 11 ಬಾಲಕರ ರಕ್ಷಣೆ : ಇಂದು ಸುರಕ್ಷಿತವಾಗಿ ಮೂವರು ಹೊರಕ್ಕೆ

ಥಾಯ್ಲೆಂಡ್ ಗುಹೆಯಲ್ಲಿ ಸಿಲುಕಿರುವ ಮಕ್ಕಳ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಗುಹೆಯಿಂದ 10 ನೇ ಬಾಲಕನೊಬ್ಬನನ್ನು ರಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

 ಬ್ಯಾಂಕಾಕ್: ಥಾಯ್ಲೆಂಡ್ ಗುಹೆಯಲ್ಲಿ ಸಿಲುಕಿರುವ ಮಕ್ಕಳ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಗುಹೆಯಿಂದ ಇಂದು  ಮೂವರು  ಬಾಲಕರನ್ನು ಸುರಕ್ಷಿತವಾಗಿ ಹೊರ ತರಲಾಗಿದ್ದು, ಒಟ್ಟಾರೇ 11 ಬಾಲಕರನ್ನು    ರಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಇಂದು 11, 10 ಹಾಗೂ  9 ನೇ  ಬಾಲಕನನ್ನು  ಸುರಕ್ಷಿತವಾಗಿ ಹೊರಗೆ ತರಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.  12 ನೇ ಬಾಲಕ ಹಾಗೂ ಅವರ ಸೊಕ್ಕರ್ ಕೋಚ್ ಎರಡು ವಾರಗಳಿಂದಲೂ  ನಾಪತ್ತೆಯಾಗಿದ್ದಾರೆ.  13 ಮಂದಿಯನ್ನು  ಸುರಕ್ಷಿತವಾಗಿ ಹೊರಗೆ ತರುವುದಾಗಿ  ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.
ಮಳೆಯ ನೀರಿನಿಂದ ತುಂಬಿದ ಗುಹೆಯಲ್ಲಿ ಸಿಲುಕಿದ 11 ಮಂದಿಯನ್ನು ಈವರೆಗೂ ಸುರಕ್ಷಿತವಾಗಿ ಹೊರಗೆ ತರಲಾಗಿದೆ. ಇವರೆಲ್ಲರೂ 18 ದಿನಗಳಿಂದಲೂ ಗುಹೆಯಲ್ಲಿಯೇ ಸಿಲುಕಿದದ್ದು  ಕಂಡುಬಂದಿದೆ ಎಂದು ಕಾರ್ಯಾಚರಣೆಯ ಮುಖ್ಯಸ್ಥರು ತಿಳಿಸಿದ್ದಾರೆ. ಆದಾಗ್ಯೂ, ಭಾರೀ ಮಳೆಯಿಂದ ಕಾರ್ಯಾಚಾರಣೆ ಮಾರ್ಗ ನೆಲದೊಳಗೆ ಮುಚ್ಚಿದೆ ಎಂಬುದು ತಿಳಿದುಬಂದಿದೆ.
ಉತ್ತರ ಥಾಯ್ಲೆಂಡ್ ನ  ಕಣಿವೆ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದಲೂ ಮಲೆಯಾಗುತ್ತಿದ್ದು, ಉಳಿದಿರುವ  ಇಬ್ಬರನ್ನು  ಮೇಲಕ್ಕೆ ತರುವುದೇ ನಮ್ಮ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದೆರಡು ದಿನಗಳಿಗಿಂತಲೂ ಇಂದು ಕ್ಷಿಪ್ರಗತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಎಲ್ಲಾ 8 ಬಾಲಕರ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಜ್ವರ ಇಲ್ಲ. ಅವರ ಮಾನಸಿಕ ಸ್ಥಿತಿ ಸೇರಿದಂತೆ ಎಲ್ಲಾವೂ  ಸರಿಯಾಗಿದೆ ಎಂದು  ಸಾರ್ವಜನಿಕ ಆರೋಗ್ಯ ಸಚಿವಾಲದ ಕಾಯಂ ಕಾರ್ಯದರ್ಶಿ ಜೆಡ್ ಸಾದಾ ಚೊಕದಾರ್ಮೊಂಗ್ ಸಕು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT