292 ಮೊಸಳೆಗಳ ಮಾರಣಹೋಮ; ವ್ಯಕ್ತಿ ಕೊಂದಿದ್ದಕ್ಕೆ ಸೇಡು ತೀರಿಸಿಕೊಂಡ ಜನತೆ 
ವಿದೇಶ

292 ಮೊಸಳೆಗಳ ಮಾರಣಹೋಮ; ವ್ಯಕ್ತಿ ಕೊಂದಿದ್ದಕ್ಕೆ ಸೇಡು ತೀರಿಸಿಕೊಂಡ ಜನತೆ

ವ್ಯಕ್ತಿಯೊಬ್ಬನನ್ನು ದಾರುಣವಾಗಿ ಕೊಂದು ಹಾಕಿದ್ದ ಮೊಸಳೆಗಳ ವಿರುದ್ಧ ತಿರುಗಿಬಿದ್ದ ಗ್ರಾಮವೊಂದು 292 ಮೊಸಳೆಗಳನ್ನು ಹತ್ಯೆ ಮಾಡಿರುವ ಘಟನೆ ಇಂಡೋನೇಷಿಯಾದಲ್ಲಿ ನಡೆದಿದೆ...

ಜಕಾರ್ತಾ: ವ್ಯಕ್ತಿಯೊಬ್ಬನನ್ನು ದಾರುಣವಾಗಿ ಕೊಂದು ಹಾಕಿದ್ದ ಮೊಸಳೆಗಳ ವಿರುದ್ಧ ತಿರುಗಿಬಿದ್ದ ಗ್ರಾಮವೊಂದು 292 ಮೊಸಳೆಗಳನ್ನು ಹತ್ಯೆ ಮಾಡಿರುವ ಘಟನೆ ಇಂಡೋನೇಷಿಯಾದಲ್ಲಿ ನಡೆದಿದೆ. 
ವೆಸ್ಟ್ ಪೌವಾ ಪ್ರಾಂತ್ಯದ ಸೋರಾಂಗ್ ಜಿಲ್ಲೆಯಲ್ಲಿ ಮೊಸಳೆಗಳ ಫಾರ್ಮ್ ವೊಂದರಲ್ಲಿ ನೂರಾರು ಮೊಸಳೆಗಳನ್ನು ಸಾಕಲಾಗಿತ್ತು. ಪ್ರಾಣಿಗಳಿಗೆ ಮೇವುಗಳನ್ನು ನೀಡುವ ಸಲುವಾಗಿ ಫಾರ್ಮ್'ಗೆ ಹೋಗಿದ್ದ ವ್ಯಕ್ತಿಯ ಮೇಲೆ ಈ ಮೊಸಳೆಗಳು ದಾಳಿ ಮಾಡಿ, ದಾರುಣವಾಗಿ ಕೊಂದು ಹಾಕಿದ್ದವು. 
ವ್ಯಕ್ತಿಯೊಬ್ಬ ಸಹಾಯಕ್ಕಾಗಿ ಕಿರುಚಾಡುತ್ತಿದ್ದ ಶಬ್ಧ ಕೇಳಿಸಿತ್ತು. ಕೂಡಲೇ ಸ್ಥಳಕ್ಕೆ ಹೋದಾಗ ವ್ಯಕ್ತಿಯೊಬ್ಬರ ಮೇಲೆ ಮೊಸಳೆಗಳು ದಾಳಿ ಮಾಡಿದ್ದವು ಎಂದು ಸಿಬ್ಬಂದಿಯೊಬ್ಬ ಹೇಳಿದ್ದಾನೆ.
ಶನಿವಾರ ಈ ಘಟನೆ ನಡೆದಿತ್ತು, ಮತ್ತೆಂದೂ ಇಂತಹ ಘಟನೆಗಳು ಸಂಭವಿಸಬಾರದೆಂದು ಗ್ರಾಮಸ್ಥರು ಮೊಸಳೆಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದರು. 
ಮೊಸಳೆಗಳ ವಿರುದ್ದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಸಣ್ಣದು, ದೊಡ್ಡಲು ಎಂಬುದನ್ನು ನೋಡದೆಯೇ ಆಯುಧಗಳಿಂದ 292 ಮೊಸಳೆಗಳನ್ನು ಕೊಂದು ಹಾಕಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜನರ ಸೇರಿದ್ದರಿಂದಾಗಿ ಮೊಸಳೆಗಳ ಮಾರಣಹೋಮ ತಡೆಗಟ್ಟಲು ಅಲ್ಲಿನ ಸಿಬ್ಬಂದಿಗಳಿಗೂ ಸಾಧ್ಯವಾಗಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT