ಅಬ್ದುಲ್ ರಶೀದ್ ದೋಸ್ತಮ್ 
ವಿದೇಶ

ಅಫ್ಘಾನಿಸ್ತಾನ : ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯಾ ದಾಳಿ : 14 ಸಾವು, 60 ಮಂದಿ ಗಾಯ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್ : ಐಸಿಸ್ ಉಗ್ರರು  ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆದಿದ್ದಾರೆ.  ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಉಪಾಧ್ಯಕ್ಷ  ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು,  ಘಟನೆಯಲ್ಲಿ  14 ಮಂದಿ ಮೃತಪಟ್ಟಿದ್ದು,  60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಬ್ದುಲ್ ರಶೀದ್ ದೋಸ್ತಮ್  ಸ್ವಾಗತಿಸಲು  ಸರ್ಕಾರದ ಹಿರಿಯ ಅಧಿಕಾರಿಗಳು, ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಆಗಮಿಸಿದ್ದರು.  ಈ ಸಂದರ್ಭದಲ್ಲಿ ದಾಳಿ ನಡೆದಿದೆ. ಮೊದಲ ಬಾರಿಗೆ ಇಂತಹ ದಾಳಿ ನೋಡುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚೆಲ್ಲಾಪಿಲ್ಲಿಯಾಗಿ ಬಿದಿದ್ದ ಮನುಷ್ಯರ ಮಾಂಸಗಳನ್ನು ಕೆಲವರು ಸಂಗ್ರಹಿಸುತ್ತಿದ್ದರು. ಅಫ್ಘಾನಿಸ್ತಾನದಲ್ಲಿ  ಏನು ನಡೆಯುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಪಾಶ್ಚಾತ್ಯ ಸೂಟ್ ಮತ್ತು  ಶಸ್ತ್ರಸಜ್ಜಿತ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದೋಸ್ತಮ್   ಅವರಿಗೆ  ಯಾವುದೇ ರೀತಿಯ ಗಾಯವಾಗಿಲ್ಲ ಎಂದು ವಕ್ತಾರ ಬಾಷಿರ್ ಅಹ್ಮದ್ ತಯಾಂಜ್ ತಿಳಿಸಿದ್ದಾರೆ.

 ಘಟನೆಯಲ್ಲಿ 14 ಮಂದಿ ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 9 ಭದ್ರತಾ ಪಡೆ  ಹಾಗೂ ಸಂಚಾರ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಹಸ್ಮತ್ ಸ್ಟಾನಿಕ್ ಜಾಯ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT