ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ 
ವಿದೇಶ

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ 2018: ಮತದಾನದ ವೇಳೆ ಆತ್ಮಹತ್ಯಾ ಬಾಂಬ್ ಸ್ಫೋಟ, 34 ಸಾವು

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ 2018ರ ಮತದಾನ ಪ್ರಕ್ರಿಯೆ ಆರಂಭವಾಗಿರುವಂತೆಯೇ ಅತ್ತ ಬಲೂಚಿಸ್ತಾನದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದಿಂದಾಗಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ 2018ರ ಮತದಾನ ಪ್ರಕ್ರಿಯೆ ಆರಂಭವಾಗಿರುವಂತೆಯೇ ಅತ್ತ ಬಲೂಚಿಸ್ತಾನದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದಿಂದಾಗಿ 34 ಮಂದಿ ಸಾವನ್ನಪ್ಪಿ, 36 ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಬಲೂಚಿಸ್ತಾನದ ಖ್ವೆಟ್ಟಾದಲ್ಲಿ ಈ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, ಮತಗಟ್ಟೆ ಸಮೀಪವೇ ಸ್ಫೋಟ ನಡೆದಿರುವುದರಿಂದ ಮತದಾನಕ್ಕೆ ಆಗಮಿಸಿದ್ದ ಹತ್ತಾರು ಮಂದಿ ಸಾವಿಗೀಡಾಗಿದ್ದಾರೆ. ಮೂಲಗಳ ಪ್ರಕಾರ ಅನಾಮಿಕ ವ್ಯಕ್ತಿಯೋರ್ವ ಖ್ವೆಟ್ಟಾದ ಮತಗಟ್ಟೆಯೊಳಗೆ ಪ್ರವೇಶ ಮಾಡಲು ಯತ್ನಿಸಿದ್ದು, ಈ ವೇಳೆ ಭದ್ರತಾ ಅಧಿಕಾರಿಗಳು ಆತನನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಕೂಡಲೇ ಆತ ತನ್ನ ಸೊಂಟಕ್ಕೆ ಕಟ್ಟಿಕೊಂಡಿದ್ದ ಬಾಂಬ್ ಅನ್ನು ಸ್ಫೋಟಿಸಿಕೊಂಡಿದ್ದಾನೆ.
ಘಟನೆಯಲ್ಲಿ 34 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮತಗಟ್ಟೆ ಬಳಿ ಮತದಾನ ಮಾಡಲು ನೂರಾರು ಮಂದಿ ಸಾಲುಗಟ್ಟಿ ನಿಂತಿದ್ದರು. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ಜಾರೆ.
ಸ್ಫೋಟದ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ
ಇನ್ನು ಬಾಂಬ್ ದಾಳಿ ನಡೆಸಿದ್ದು ನಾನೇ ಎಂದು ಕುಖ್ಯಾತ ಉಗ್ರ ಸಂಘಟನೆ ಇಸಿಸ್ ಹೇಳಿಕೊಂಡಿದ್ದು, ಈ ಬಗ್ಗೆ ತನ್ನ ಮುಖವಾಣಿ ಅಮಾಕ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ. 
ಇನ್ನು ಹಾಲಿ ಚುನಾವಣೆಯನ್ನು ಮಾಜಿ ಪ್ರಧಾನಿ ನವಾಜ್ ಷರೀಪ್ ಹಾಗೂ ಇಮ್ರಾನ್ ಖಾನ್ ಅವರ ನಡುವಿನ ಸ್ಪರ್ಧೆ ಎಂದು ಬಿಂಬಿಸಲಾಗುತ್ತಿದೆಯಾದರೂ, ಇದೇ ಮೊದಲ ಬಾರಿಗೆ ಸ್ಥಳೀಯ ಪಕ್ಷದೊಂದಿಗೆ ಸೇರಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕುಖ್ಯಾತ ಉಗ್ರ ಹಾಗೂ ಮುಂಬೈ ದಾಳಿ ರೂವಾರಿ ಹಫೀಜ್ ಸಯ್ಯೀದ್ ಕೂಡ ಕಿಂಗ್ ಮೇಕರ್ ಆಗಲು ಹೊರಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ