ಮೋದಿ, ಕ್ಸಿ- ಜಿನ್ ಪಿಂಗ್ 
ವಿದೇಶ

ಎಸ್ ಸಿ ಓ ಶೃಂಗಸಭೆ: ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಭೇಟಿ, ಮಾತುಕತೆ

18ನೇ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಚೀನಾದ ಕ್ವಿಂಗ್ಡಾವೊಗೆ ಆಗಮಿಸಿರುವ...

ಕ್ವಿಂಗ್ಡಾವೊ: ಎರಡು ದಿನಗಳ 18ನೇ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಚೀನಾದ ಕ್ವಿಂಗ್ಡಾವೊಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಅವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಕಳೆದ ತಿಂಗಳು ವುಹಾನ್ ನಲ್ಲಿ ನಡೆದ ಅನೌಪಚಾರಿಕ ಕ್ರಮಗಳ ಅನುಷ್ಠಾನ ಸಂಬಂಧವೂ ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದರು.
8ನೇ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ಭಾಗವಾಗಿ ನಡೆದ ಚರ್ಚೆಯಲ್ಲಿ  ಭಯೋತ್ಪಾದನೆ, ಉಗ್ರಗಾಮಿತ್ವ ಹಾಗೂ ತೀವ್ರಗಾಮಿತ್ವದ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರ ಸೇರಿದಂತೆ ಅನೇಕ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಒಟ್ಟಾರೆ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಮೂಲಕ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸಲು ಮೋದಿ ಮತ್ತು ಕ್ಸಿ ಮಾರ್ಗಗಳನ್ನು ಅನ್ವೇಷಿಸಹುದೆಂದು ನಿರೀಕ್ಷಿಸಲಾಗಿದೆ.
ವೂಹಾನ್ ಅನೌಪಚಾರಿಕ ಶೃಂಗಸಭೆಯ ವಾರಗಳ ನಂತರ ನಡೆದ ಸಭೆಯಲ್ಲಿ ಏಷ್ಯಾದ ಅಧಿಕಾರಗಳ ನಡುವಿನ ಸಂಬಂಧವನ್ನು ಬಲಪಡಿಸುವ ದೃಷ್ಟಿಕೋನವನ್ನು ವಿನಿಮಯ ಮಾಡಿಕೊಂಡರು.
ವೂಹಾನ್ ಅನೌಪಚಾರಿಕ ಶೃಂಗಸಭೆಯಲ್ಲಿ ಅವರು ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಮೋದಿ ಮತ್ತು ಕ್ಸಿ ಅವರು ಪ್ರಗತಿ ಸಾಧಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಇತರ ಎಸ್ ಸಿ ಓ ದೇಶಗಳ ನಾಯಕರೊಂದಿಗೆ ಸುಮಾರು ಅರ್ಧ ಡಜನ್ ಗಿಂತಲೂ ಹೆಚ್ಚು  ದ್ವಿಪಕ್ಷೀಯ ಸಭೆಗಳನ್ನು ಮೋದಿ ನಡೆಸಿಕೊಳ್ಳುವ ನಿರೀಕ್ಷೆಯಿದೆ.
ಎಸ್ ಸಿ ಓ ಶೃಂಗಸಭೆಯಲ್ಲಿ ಭಾರತ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದೆ. ಪಾಕಿಸ್ತಾನವೂ ಇದರಲ್ಲಿ ಪಾಲ್ಗೊಂಡಿದ್ದು, ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರಗಳಾಗಿವೆ. ಎಸ್ ಸಿಓ ಹೆಚ್ಚುಕಡಿಮೆ ನ್ಯಾಟೋಗೆ ಪ್ರತಿಯಾಗಿ ಕಂಡುಬಂದಿದೆ.
ಶಾಂಘೈನಲ್ಲಿ 2001ರಲ್ಲಿ ನಡೆದ ಶೃಂಗಸಭೆಯಲ್ಲಿ ಚೀನಾ, ರಷ್ಯಾ, ಕಜಕಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರಿಂದ ಎಸ್ ಸಿ ಓ ಸ್ಥಾಪನೆಯಾಗಲ್ಪಟ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT