ಸಿಂಗಾಪುರ ಶೃಂಗಸಭೆ 
ವಿದೇಶ

ಸಿಂಗಾಪುರ ಶೃಂಗಸಭೆ: ಶಾಂತಿ, ಸಹಬಾಳ್ವೆ, ವಿಶ್ವ ಭದ್ರತೆಗಾಗಿ ಅಮೆರಿಕ, ಉ.ಕೊರಿಯಾ ಜಂಟಿ ಕಾರ್ಯನಿರ್ವಹಣೆ

ಉತ್ತರ ಕೊರಿಯಾ ಮತ್ತು ಅಮೆರಿಕ ಅಭಿವೃದ್ಧಿ, ದ್ವಿಪಕ್ಷೀಯ ಸಂಬಂಧ ವೃದ್ಧಿ, ಶಾಂತಿ ಪ್ರಸರಣೆ, ಸಹಬಾಳ್ವೆ, ವಿಶ್ವದ ಭದ್ರತೆಗಾಗಿ ಜಂಟಿಯಾಗಿ ಕಾರ್ಯ ನಿರ್ವಹಿಸುವ ಕುರಿತು ನಿರ್ಣಯ ಕೈಗೊಂಡಿ..

ಸಿಂಗಾಪುರ: ಉತ್ತರ ಕೊರಿಯಾ ಮತ್ತು ಅಮೆರಿಕ ಅಭಿವೃದ್ಧಿ, ದ್ವಿಪಕ್ಷೀಯ ಸಂಬಂಧ ವೃದ್ಧಿ, ಶಾಂತಿ ಪ್ರಸರಣೆ, ಸಹಬಾಳ್ವೆ, ವಿಶ್ವದ ಭದ್ರತೆಗಾಗಿ ಜಂಟಿಯಾಗಿ ಕಾರ್ಯ ನಿರ್ವಹಿಸುವ ಕುರಿತು ನಿರ್ಣಯ ಕೈಗೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹೇಳಿದ್ದಾರೆ.
ಸಿಂಗಾಪುರದ ಸೆಂಟೋಸಾ ದ್ವೀಪದಲ್ಲಿರುವ ಕ್ಯಾಪೆಲ್ಲಾ ಹೋಟೆಲ್​ನಲ್ಲಿ ನಡೆದ ಮಹತ್ವದ ಶೃಂಗಸಭೆಯಲ್ಲಿ ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಂಟಿ ಹೇಳಿಕೆ ನೀಡಿದರು. ಈ ವೇಳೆ 'ಶಾಂತಿ, ಸಹಬಾಳ್ವೆ, ವಿಶ್ವದ ಭದ್ರತೆಗಾಗಿ ಅಮೆರಿಕ-ಉತ್ತರ ಕೊರಿಯಾ ಜಂಟಿಯಾಗಿ ಕಾರ್ಯ ನಿರ್ವಹಣೆ ಮಾಡಲಿವೆ ಎಂದು ಹೇಳಿದರು.
ಒಟ್ಟು ನಾಲ್ಕು ಪ್ರಮುಖ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಿದ್ದು, ಈ ಪೈಕಿ ಕೊರಿಯಾ ಆವರಣದಲ್ಲಿ ಸಂಪೂರ್ಣ 'ಅಣ್ವಸ್ತ್ರ ನಿಶ್ಯಸ್ತ್ರೀಕರಣಗೊಳಿಸುವ ಮಹತ್ವದ ಒಪ್ಪಂದಕ್ಕೆ ಉಭಯ ನಾಯಕರು ಸಹಿಹಾಕಿದ್ದಾರೆ. 
ಧನಾತ್ಮಕ ಹಾದಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿ, ಎಲ್ಲರೂ ನಿರೀಕ್ಷಿಸಿದಕ್ಕಿಂತ ಉತ್ತಮ ಕೆಲಸ ಮಾಡಿ ಉಭಯ ರಾಷ್ಟ್ರಗಳು ಮುಂಚೂಣಿಯಲ್ಲಿರುವಂತೆ ನೋಡಿಕೊಳ್ಳಲು ನಾವು ಸಹಿ ಮಾಡುತ್ತಿರುವುದಾಗಿ ಕೊರಿಯನ್ ಪರ್ಯಾಯ ದ್ವೀಪದ ಮೇಲಿನ ಪರಮಾಣು ಬಿಕ್ಕಟ್ಟನ್ನು ಅಂತ್ಯಗೊಳಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಟ್ರಂಪ್ ತಿಳಿಸಿದರು. 
ಟ್ರಂಪ್-ಕಿಮ್ ಸಹಿ ಮಾಡಿರುವ ನಾಲ್ಕು ಪ್ರಮುಖ ಒಪ್ಪಂದಗಳು ಇಂತಿವೆ
ಅಮೆರಿಕ ಸಂಯುಕ್ತ ಸಂಸ್ಥಾನ ಮತ್ತು ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾ ಪರಸ್ಪರ ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸಲು ಬದ್ಧವಾಗಿದ್ದು, ಸೌಹಾರ್ಧ ಸಂಬಂಧ ವೃದ್ದಿಗೆ ಶ್ರಮಿಸುವ ನಿರ್ಧಾರಕ್ಕೆ ಬಂದಿವೆ. ಉಭಯ ದೇಶಗಳ ಪ್ರಜೆಗಳು ಶಾಂತಿ ಮತ್ತು ಸಮೃದ್ಧಿ ಜೀವನ ನಡೆಸಲು ಪರಸ್ಪರ ಸಹಾಕಾರ ನೀಡುತ್ತೇವೆ ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ.
ಕೊರಿಯಾ ಪರ್ಯಾಯ ದ್ವೀಪದಲ್ಲಿ ಶಾಂತಿ ಮತ್ತು ಸಹಬಾಳ್ವೆಗೆ ಅನುಕೂಲಕರ ವಾತಾವರಣ ನಿರ್ಮಾಣಕ್ಕೆ ಉಭಯ ದೇಶದಳು ಬದ್ಧವಾಗಿವೆ. 
2018 ಏಪ್ರಿಲ್ 27ರ ಪನ್ಮುಂಜಮ್ ನಿರ್ಣಯದ ಅನ್ವಯ ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾ ಸಂಪೂರ್ಣ ಅಣ್ವಸ್ತ್ರ ನಿಶ್ಯಸ್ತ್ರೀಕರಣಕ್ಕಾಗಿ ಕಾರ್ಯ ನಿರ್ವಹಿಸಲಿದೆ. 
ದಕ್ಷಿಣ ಕೊರಿಯಾ ಪುನಶ್ಛೇತನ ಕಾರ್ಯದಲ್ಲಿ ಉತ್ತರ ಕೊರಿಯಾ ಸಹಕಾರದ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಒಟ್ಟಾರೆ ಸಿಂಗಾಪುರ ಶೃಂಗಸಭೆ 7 ದಶಕಗಳ ವೈಷಮ್ಯಕ್ಕೆ ತೆರೆ ಎಳೆಯು ಪ್ರಯತ್ನ ಎಂದು ಬಣ್ಣಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT