ಸಾಂದರ್ಭಿಕ ಚಿತ್ರ 
ವಿದೇಶ

ಅಮೆರಿಕಾದ 50 ಬಿಲಿಯನ್ ಡಾಲರ್ ಮೊತ್ತದ ಸರಕಿನ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಚೀನಾ

50 ಬಿಲಿಯನ್ ಡಾಲರ್ ಮೊತ್ತದ ಅಮೆರಿಕಾದ ವಸ್ತುಗಳ ಮೇಲೆ ಚೀನಾ ಹೆಚ್ಚುವರಿ ಸುಂಕ ವಿಧಿಸಿದ್ದು, ವಿಶ್ವದ ಎರಡು ಬಲಿಷ್ಠ ಆರ್ಥಿಕ ಶಕ್ತಿಗಳ ನಡುವೆ ವ್ಯಾಪಾರದ ಯುದ್ದ ಆರಂಭವಾಗಿದೆ.

ಬೀಜಿಂಗ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾದ ಸರಕಿನ ಮೇಲೆ ಶೇ.25 ರಷ್ಟು ತೆರಿಗೆ ಹೆಚ್ಚಿಸಿದ ನಂತರ ಚೀನಾ ಕೂಡಾ ಅಮೆರಿಕಾದ 50 ಬಿಲಿಯನ್ ಡಾಲರ್ ಮೊತ್ತದ ವಸ್ತುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ್ದು, ವಿಶ್ವದ ಎರಡು ಬಲಿಷ್ಠ ಆರ್ಥಿಕ ಶಕ್ತಿಗಳ ನಡುವೆ ವ್ಯಾಪಾರದ ಯುದ್ದ ಆರಂಭವಾಗಿದೆ.
ಚೀನಾ ಬೌದ್ದಿಕ ಆಸ್ತಿ ಕಳ್ಳತನ ಮಾಡುತ್ತಿದ್ದು, ಅಸಮರ್ಪಕ ವ್ಯಾಪಾರ ಪದ್ದತಿಯನ್ನು ಅನುಸರಿಸುತ್ತಿದೆ ಎಂದು ನಿನ್ನೆ ಆರೋಪಿಸಿದ ಟ್ರಂಪ್, ಚೀನಾದ ವಸ್ತುಗಳ ಮೇಲೆ ಶೇ. 25 ರಷ್ಟು ಸುಂಕವನ್ನು ಹೆಚ್ಚಿಸಿದ್ದರು. ಇದರಿಂದಾಗಿ ಚೀನಾ ಕೂಡಾ ಈಗ ಅಮೆರಿಕಾದ ಸುಮಾರು 50 ಬಿಲಿಯನ್ ಡಾಲರ್ ಮೊತ್ತದ 659 ವಸ್ತುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿದೆ ಎಂದು  ಕ್ಸಿನುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಮೆರಿಕಾ ವಸ್ತುಗಳ ಮೇಲೆ ವಿಧಿಸಲಾಗಿರುವ ಹೆಚ್ಚುವರಿ ಸುಂಕದ ಪಟ್ಟಿಯಲ್ಲಿರುವ ವಸ್ತುಗಳನ್ನು ಚೀನಾ ಬಿಡುಗಡೆ ಮಾಡಿದೆ. ಜುಲೈ 6, 2018ರಿಂದ ಜಾರಿಗೆ ಬರುವಂತೆ ಕೃಷಿ ಉತ್ಪನ್ನ, ವಾಹನಗಳು, ಸಾಗರೋತ್ಪನ್ನ ವಸ್ತುಗಳು ಸೇರಿದಂತೆ 34 ಬಿಲಿಯನ್ ಡಾಲರ್ ಮೊತ್ತದ 545 ವಸ್ತುಗಳ  ಹೆಚ್ಚುವರಿ ಸುಂಕ ವಿಧಿಸಿರುವುದಾಗಿ ಚೀನಾ ಕಸ್ಟಮ್ಸ್ ಸುಂಕ ಆಯೋಗ ತಿಳಿಸಿದೆ.
ರಾಸಾಯನಿಕ ಉತ್ಪನ್ನಗಳು, ವೈದ್ಯಕೀಯ ಉಪಕರಣ, ಇಂಧನ ಉಪಕರಣ ಮತ್ತಿತರ ಉಳಿದಿರುವ  114 ಸರಕುಗಳ ಮೇಲಿನ ಹೆಚ್ಚುವರಿ ಸುಂಕ ವಿಧಿಸುವ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ಹೇಳಿದೆ.
ಜುಲೈ 6 ರಿಂದ ಸುಮಾರು 34 ಬಿಲಿಯನ್ ಡಾಲರ್ ಮೊತ್ತದ ಚೀನಾದ ಉತ್ಪನ್ನಗಳ ಮೇಲೆ ಅಮೆರಿಕಾ ಹೆಚ್ಚುವರಿ ಸುಂಕ ವಿಧಿಸುವ ಸಾಧ್ಯತೆ ಇದೆ. ಈ ಮಧ್ಯೆ 16 ಬಿಲಿಯನ್ ಮೊತ್ತದ ಚೈನಾ ಉತ್ಪನ್ನಗಳ ಬಗ್ಗೆ ತೆರಿಗೆ ವಿಧಿಸುವ ಸಂಬಂಧ ಸಾರ್ವಜನಿಕರಿಂದ ಪ್ರತಿಕ್ರಿಯೆ ಕೇಳಲಾಗುತ್ತಿದೆ.
ಉಭಯ ದೇಶಗಳ ನಡುವೆ ವ್ಯಾಪಾರ ಸಂಬಂಧ ಮಾತುಕತೆ ಮುರಿದು ಬಿದ್ದ ನಂತರ ಮೇ ತಿಂಗಳ ಮಧ್ಯಭಾಗದಿಂದ ಅಸಮಾಧಾನ ಹೊಗೆಯಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂನ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

SCROLL FOR NEXT