ಸಂಗ್ರಹ ಚಿತ್ರ 
ವಿದೇಶ

ಇರಾನ್ ನ ಅಣ್ವಸ್ತ್ರ ಯೋಜನೆ ಮೇಲೆ ಶಾಶ್ವತ ನಿರ್ಬಂಧ ಹೇರಬೇಕು: ಅಮೆರಿಕ ಆಗ್ರಹ

ಇರಾನ್ ನ ಅಣ್ವಸ್ತ್ರ ಯೋಜನೆಗಳ ಕುರಿತು ಕೆಂಗಣ್ಣು ಬೀರಿರುವ ಅಮೆರಿಕ ಸರ್ಕಾರ ಇದೀಗ ಇರಾನ್ ನ ಅಣ್ವಸ್ತ್ರ ಯೋಜನೆಗಳ ಮೇಲೆ ಶಾಶ್ವತ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದೆ.

ವಾಷಿಂಗ್ಟನ್: ಇರಾನ್ ನ ಅಣ್ವಸ್ತ್ರ ಯೋಜನೆಗಳ ಕುರಿತು ಕೆಂಗಣ್ಣು ಬೀರಿರುವ ಅಮೆರಿಕ ಸರ್ಕಾರ ಇದೀಗ ಇರಾನ್ ನ ಅಣ್ವಸ್ತ್ರ ಯೋಜನೆಗಳ ಮೇಲೆ ಶಾಶ್ವತ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಮೆರಿಕ ಸರ್ಕಾರದ ಕಾರ್ಯದರ್ಶಿ ಮೈಕೆಲ್ ಆರ್ ಪೊಂಪೆಯೊ ಅವರು, ಇರಾನ್ ಮೇಲೆ ಶಾಶ್ವತ ಅಣ್ವಸ್ತ್ರ ಯೋಜಮೆ ನಿರ್ಬಂಧ ಹೇರಬೇಕು. ಆ ದೇಶದೊಂದಿಗೆ ಯಾವುದೇ ದೇಶಗಳು ರಕ್ಷಣಾ ಸಾಮಗ್ರಿಗಳ ವಹಿವಾಟು ಸಂಪರ್ಕ ಇಟ್ಟುಕೊಳ್ಳಬಾರದು. ಪ್ರಮುಖವಾಗಿ ಆ ದೇಶದಿಂದ ಕ್ಷಿಪಣಿಗಳ ಆಮದು ರಫ್ತು ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ಕಳೆದ ಸಾಕಷ್ಟು ವರ್ಷಗಳಿಂದ ಇರಾನ್ ರಹಸ್ಯವಾಗಿ ಅಣ್ವಸ್ತ್ರ ಯೋಜನೆಯನ್ನು ಮುನ್ನಡೆಸಿಕೊಂಡು ಬಂದಿದೆ. ಇದು ಇಡೀ ಜಗತ್ತಿಗೆ ಅಪಾಯಕಾರಿ. ಅಣ್ವಸ್ತ್ರ ನಿಶ್ಯಸ್ತ್ರೀಕರಣದ 50ನೇ ವಾರ್ಷಿಕೋತ್ಸವದಲ್ಲಿರುವ ನಾವು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಈ ಸಂಬಂಧ ಇರುವ ನೀತಿ ನಿರೂಪಣೆಗಳನ್ನು ಮತ್ತಷ್ಟು ಕಠಿಣಗೊಳಿಸಬೇಕು. ಈ ಸಂಬಂಧ ಇರಾನ್ ಮತ್ತು ಉತ್ತರ ಕೊರಿಯಾದಿಂದ ಎದುರಾಗುತ್ತಿರುವ ಸವಾಲುಗಳಿಗೆ ತಕ್ಕ ಉತ್ತರ ನೀಡಲೇಬೇಕು ಎಂದು ಹೇಳಿದ್ದಾರೆ.
ಅಂತೆಯೇ ಇರಾನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಇರಾನ್ ಜನತೆ ತಮ್ಮ ದೇಶದ ಸರ್ಕಾರದ ಭ್ರಷ್ಟಾಚಾರದಿಂದ ನಲುಗುತ್ತಿದ್ದಾರೆ. ಸರ್ಕಾರದ ವಿರುದ್ಧದ ಪ್ರತಿನಿತ್ಯ ಪ್ರತಿಭಟನೆಗಳು ಆ ಸಕ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಆ ಸರ್ಕಾರ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದು, ಪ್ರತಿಭಟನಾಕಾರರ ಬಂಧನ, ಕಿರುಕುಳ ಮತ್ತು ಭದ್ರತಾ ಸಿಬ್ಬಂದಿಗಳ ದುರ್ಬಳಕೆ ಮಾಡಿಕೊಂಡು ಹಲ್ಲೆ ಮಾಡುತ್ತಿದೆ ಎಂದು ಪೊಂಪೆಯೊ ಕಿಡಿಕಾರಿದ್ದಾರೆ.
ಇತ್ತೀಚೆಗಷ್ಟೇ ಅಣ್ವಸ್ತ್ರ ಯೋಜನೆ ಸಂಬಂಧ ಇರಾನ್ ವಿರುದ್ಧ ಕಿಡಿಕಾರಿದ್ದ ಅಮೆರಿಕ, ಭಾರತಕ್ಕೆ ಆ ದೇಶದಿಂದ ತೈಲ ಆಮದು ಮಾಡಿಕೊಳ್ಳದಂತೆ ಆಗ್ರಹಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT