ಸಂಗ್ರಹ ಚಿತ್ರ 
ವಿದೇಶ

ಅಮೆರಿಕ ದ್ವಿಪಕ್ಷೀಯ ಮಾತುಕತೆ ಆರಂಭಿಸಿದರೆ, ಅಣ್ಪಸ್ತ್ರ ಪರೀಕ್ಷೆ ಸ್ಥಗಿತ: ಉತ್ತರ ಕೊರಿಯಾ

ಅಮೆರಿಕ ದ್ವಿಪಕ್ಷೀಯ ಮಾತುಕತೆ ಆರಂಭಿಸಿದರೆ ತಾನು ತನ್ನ ಎಲ್ಲ ರೀತಿಯ ಅಣ್ವಸ್ತ್ರ ಪರೀಕ್ಷೆಗಳನ್ನು ಸ್ಥಗಿತಗೊಳಿಸುವುದಾಗಿ ಉತ್ತರ ಕೊರಿಯಾ ಹೇಳಿದೆ.

ಪ್ಯೋಂಗ್ಯಾಂಗ್: ಅಮೆರಿಕ ದ್ವಿಪಕ್ಷೀಯ ಮಾತುಕತೆ ಆರಂಭಿಸಿದರೆ ತಾನು ತನ್ನ ಎಲ್ಲ ರೀತಿಯ ಅಣ್ವಸ್ತ್ರ ಪರೀಕ್ಷೆಗಳನ್ನು ಸ್ಥಗಿತಗೊಳಿಸುವುದಾಗಿ ಉತ್ತರ ಕೊರಿಯಾ ಹೇಳಿದೆ.
ಈ ಬಗ್ಗೆ ದಕ್ಷಿಣ ಕೊರಿಯಾದ ಅಧ್ಯಕ್ಷೀಯ ರಾಷ್ಟ್ರೀಯ ಭದ್ರತಾ ನಿರ್ದೇಶಕ ಚುಂಗ್ ಎಯಿ-ಯಾಂಗ್ ಅವರು ಮಾಹಿತಿ ನೀಡಿದ್ದು, ಅಮೆರಿಕ ಪೂರ್ಣ ಮನಸ್ಸಿನಿಂದ ಉತ್ತರಕೊರಿಯಾದೊಂದಿಗೆ ದ್ವಿಪಕ್ಷೀಯ ಮಾತುಕತೆ ಆರಂಭಿಸಿದರೆ ಉತ್ತರ ಕೊರಿಯಾ ತನ್ನೆಲ್ಲಾ ಅಣ್ವಸ್ತ್ರಗಳ ಪರೀಕ್ಷೆಯನ್ನು ಸ್ಥಗಿತಗೊಳಿಸಲಿದೆ. ಮುಖ್ಯವಾಗಿ ಉತ್ತರ ಕೊರಿಯಾ ಮತ್ತು ಅಮೆರಿಕ ನಡುವೆ ಏರ್ಪಟ್ಟಿರುವ ಶೀಥಲ ಸಮರ ಕೊನೆಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಉತ್ತರ ಕೊರಿಯಾ ತನ್ನ ನಿರ್ಧಾರವನ್ನು ಸ್ಪಷ್ಟಪಡಿಸಿದ್ದು, ಅಮೆರಿಕ ಪೂರ್ಣ ಸಹಕಾರದೊಂದಿಗೆ ದ್ವಿಪಕ್ಷೀಯ ಮಾತುಕತೆ ಆರಂಭಿಸಿದರೆ, ತಾವು ಕ್ಷಿಪಣಿ ಸೇರಿದಂತೆ ಇನ್ನಾವುದೇ ಅಣ್ವಸ್ತ್ರಗಳ ಪರೀಕ್ಷೆಗೆ ಮುಂದಾಗುವುದಿಲ್ಲ ಎಂಬ ಭರವಸೆ ನೀಡುತ್ತೇವೆ. ದೇಶದ ವಿರುದ್ಧದ ಭದ್ರತಾ ಆತಂಕ ದೂರವಾಗದರೆ ನಮಗೂ ಅಣ್ವಸ್ತ್ರ ಬಳಕೆಯ ಅಗತ್ಯತೆ ಬೀಳುವುದಿಲ್ಲ ಎಂದು ಉತ್ತರಕೊರಿಯಾ ಅಧಿಕಾರಿಗಳು ಹೇಳಿದ್ದಾರೆ ಎಂದು ದಕ್ಷಿಣ ಕೊರಿಯಾದ ಅಧ್ಯಕ್ಷೀಯ ರಾಷ್ಟ್ರೀಯ ಭದ್ರತಾ ನಿರ್ದೇಶಕರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಉತ್ತರಕೊರಿಯಾದ ಉನ್ನತ ಅಧಿಕಾರಿಗಳ ನಿಯೋಗ ಸಿಯೋಲ್ ಗೆ ಭೇಟಿ ನೀಡಿತ್ತು. ಈ ವೇಳೆ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರ ಸಹೋದರಿ ಕೂಡ ನಿಯೋಗದಲ್ಲಿ ಇದ್ದರು. ಈ ವೇಳೆ ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ದೇಶಗಳು ತಮ್ಮ ನಡುವಿನ ಶತೃತ್ವ ಮರೆತು ಪರಸ್ಪರ ಭದ್ರತಾ ಸಹಕಾರ, ದ್ವಿಪಕ್ಷೀಯ ವಾಣಿಜ್ಯವಹಿವಾಟು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT