ಬಾಂಗ್ಲಾದೇಶದ ಪ್ರಯಾಣಿಕ ವಿಮಾನ ನೇಪಾಳದಲ್ಲಿ ಬೆಂಕಿಗಾಹುತಿ 
ವಿದೇಶ

ನೇಪಾಳ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನ ಪತನ; 49 ಮಂದಿ ಸಾವು

ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ

ಕಠ್ಮಂಡು(ನೇಪಾಳ): ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಕನಿಷ್ಠ 17 ಮಂದಿಯನ್ನು ರಕ್ಷಿಸಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ  ಕನಿಷ್ಟ 49 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಬಾಂಗ್ಲಾ ರಾಜಧಾನಿ ಢಾಕಾ ದಿಂದ ಬರುತ್ತಿದ್ದು ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ವಿಮಾನದ ಬೆಂಕಿಯಿಂದ ಉಂಟಾದ ದಟ್ಟ ಹೊಗೆಯ ಕಾರ್ಮೋಡದಿಂದಾಗಿ ನೇಪಾಳದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುರ್ತಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಮಾನದಲ್ಲಿ ಒಟ್ಟು 67 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿಗಳಿದ್ದರು.

ಇದಾಗಲೇ ನಾವು ಮೃತ ದೇಹಗಳನ್ನು ವಿಮಾನದಿಂಡ ಹೊರತೆಗೆದಿದ್ದೇವೆ. ಗಾಯಗೊಂಡ  20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನೇಪಾಳ ಸರ್ಕಾರದ ವಕ್ತಾರ ನಾರಾಯಣ ಪ್ರಸಾದ್ ದುವಾದಿ ಎಪಿಪಿಗೆ ಹೇಳಿದ್ದಾರೆ.


ಘಟನೆಯಲ್ಲಿ ಓಟ್ಟು ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ನಾಲ್ಕು ಗಂಟೆಯವರೆವಿಗೆ ಒಟ್ಟು 12 ಮೃತದೇಹಗಳನ್ನು ವಶಕ್ಕೆ ಹೊರತೆಗೆಯಲಾಗಿದ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT