ಸಂಗ್ರಹ ಚಿತ್ರ 
ವಿದೇಶ

ಪಾಕಿಸ್ತಾನವನ್ನು ಪ್ರೀತಿಸುವವರ ಶಿಕ್ಷಿಸಲೇಬೇಕು: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ

ಪಾಕಿಸ್ತಾನವನ್ನು ಪ್ರೀತಿಸುವವರ ಶಿಕ್ಷಿಸಲೇಬೇಕು ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಢಾಕಾ: ಪಾಕಿಸ್ತಾನವನ್ನು ಪ್ರೀತಿಸುವವರ ಶಿಕ್ಷಿಸಲೇಬೇಕು ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಭಾನುವಾರ ರಾಜಧಾನಿ ಢಾಕಾಜಲ್ಲಿ ಆಡಳಿತಾ ರೂಢ ಅವಾಮಿ ಲೀಗ್ ಪಕ್ಷ ಬಂಗಬಂಧು ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಆಯೋಜನೆ ಮಾಡಲಾಗಿದ್ದ ಬಾಂಗ್ಲಾ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶೇಖ್ ಹಸೀನಾ ಪಾಕಿಸ್ತಾನದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿರುವ ಪಾಕಿಸ್ತಾನಿ ಪ್ರಿಯರನ್ನು ಪತ್ತೆ ಮಾಡಿ ಶಿಕ್ಷಿಸಲೇ ಬೇಕಿದೆ ಎಂದು ಹೇಳಿದರು.
"1971 ಮಾರ್ಚ್ 25ರಂದು ಬಾಂಗ್ಲಾ ವಿಮೋಚನೆ ವೇಳೆ ಪಾಕಿಸ್ತಾನ ನಮ್ಮ ನಾಡಿನಲ್ಲಿ ನಡೆಸಿದ ನರಮೇಧವನ್ನು ನೆನರಪಿಸಿಕೊಳ್ಳಿ, ಲಕ್ಷಾಂತರ ಅಮಾಯಕರನ್ನು ಕೊಂದು ನಮ್ಮ ಮನೆಯ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ವೆಸಗಿ ಕ್ರೂರವಾಗಿ ಕೊಂದು ಹಾಕಲಾಗಿತ್ತು. ಆ ದೃಶ್ಯಗಳು ಇನ್ನೂ ನಮ್ಮ ಕಣ್ಣ ಮುಂದಿದೆ. ದೇಶದಲ್ಲಿರುವ ಪಾಕಿಸ್ತಾನಿ ಪ್ರಿಯರನ್ನು  ಗುರುತಿಸಲು ಬಾಂಗ್ಲಾದೇಶ ಪ್ರಜೆಗಳು ಸರ್ಕಾರಕ್ಕೆ ನೆರವು ನೀಡಬೇಕು. ಇಲ್ಲವಾದಲ್ಲಿ ನಮ್ಮ ನೆಲದಲ್ಲಿ ನಮ್ಮ ಅಸ್ಥಿತ್ವವೇ ಇರುವುದಿಲ್ಲ ಎಂದು ಹಸೀನಾ ಹೇಳಿದರು.
ಇದೇ ವೇಳೆ 1975ರಲ್ಲಿ ಹತ್ಯೆಗೀಡಾದ ತಮ್ಮ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರನ್ನು ನೆನಪಿಸಿಕೊಂಡ ಶೇಖ್ ಹಸೀನಾ, ಭಾವುಕರಾದರು. ಇದೇ ವೇಳೆ ಕೆಲ ವಿಪಕ್ಷ ನಾಯಕರನ್ನು ಪಾಕಿಸ್ತಾನಿ ಪ್ರಿಯರು ಎಂದು ಕರೆದ ಹಸೀನಾ ಅವರ ಹೆಸರನ್ನೂ ಕೂಡ ಬಹಿರಂಗಗೊಳಿಸಿದರು. ತಮ್ಮ ರಾಜಕೀಯ ವಿರೋಧಿ, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಮುಖ್ಯಸ್ಥ ಜಿಯಾ ಉರ್ ರೆಹಮಾನ್ ಮತ್ತು ಅವರ ಪತ್ನಿ ತಮ್ಮ ಬದ್ಧ ವೈರಿ ಬೇಗಂ ಖಲೀದಾ ಜಿಯಾ ಪಾಕಿಸ್ತಾನ ದೇಶವನ್ನು ಪ್ರೀತಿಸುತ್ತಾರೆ. ಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಮ್ಮ ಆಕ್ರೋಶ ಹೊರಹಾಕಿದರು.
1975ರ ಬಳಿಕ ಬಾಂಗ್ಲಾದೇಶದಲ್ಲಿ ಸಂಪೂರ್ಣ ಚಿತ್ರಣವೇ ಬದಲಾಗಿ ಹೋಗಿತ್ತು. 75ರ ಬಳಿಕ ಬಾಂಗ್ಲಾದೇಶದ ಯಾವೊಬ್ಬ ಪ್ರಜೆಕೂಡ ಪಾಕಿಸ್ತಾನಿ ಸೇನೆಯನ್ನು ಬಾಂಗ್ಲಾ ಸೇನೆ ಎಂದು ಕರೆಯುತ್ತಿರಲಿಲ್ಲ. ಬದಲಿಗೆ ಪಾಕ್ ಆಕ್ರಮಿತ ಸೈನಿಕರು ಎಂದು ಕರೆಯುತ್ತಿದ್ದರು. 1975ರಲ್ಲಿ ಅಧಿಕಾರಕ್ಕೆ ಬಂದವರು ಪ್ರಜೆಗಳ ಹಣೆಬರಹ ಬದಲಿಸಲು ಬಂದವಾರಾಗಿರಲಿಲ್ಲ. ತಮ್ಮ ಸ್ವಹಿತಾಸಕ್ತಿಗಾಗಿ ರಾಜಕೀಯ ಮಾಡಿದರು. ಬಾಂಗ್ಲಾದೇಶದ ಅಭಿಲವೃದ್ಧಿ ಬೇಕಿರಲಿಲ್ಲ ಎಂದು ಹಸೀನಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT