ಸಂಗ್ರಹ ಚಿತ್ರ 
ವಿದೇಶ

ಪತ್ರಕರ್ತರ ಸಾವು: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟರ್ರೆಸ್

ಮರಳು ಮಾಫಿಯಾ ಬಯಲಿಗೆಳೆದಿದ್ದ ಮಧ್ಯ ಪ್ರದೇಶದ ಪತ್ರಕರ್ತರ ಸಾವಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟರ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್: ಮರಳು ಮಾಫಿಯಾ ಬಯಲಿಗೆಳೆದಿದ್ದ ಮಧ್ಯ ಪ್ರದೇಶದ ಪತ್ರಕರ್ತರ ಸಾವಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟರ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಆಂಟೋನಿಯೊ ಗುಟರ್ರೆಸ್ ಅವರು, ವಿಶ್ವದ ಯಾವುದೇ ಮೂಲೆಯಲ್ಲಾದರೂ ಪತ್ರಕರ್ತರ ಮೇಲಿನ ದೌರ್ಜನ್ಯ ಆತಂಕಕಾರಿ ಎಂದು ಹೇಳಿದ್ದಾರೆ ಈ ಬಗ್ಗೆ ಅವರ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, 'ಪತ್ರಕರ್ತರ ಮೇಲೆನ ದಾಳಿ ನಿಜಕ್ಕೂ ಕಳವಳಕಾರಿ. ವಿಶ್ವದ ಯಾವುದೇ ಮೂಲೆಯಲ್ಲಾದರೂ ಇಂತಹ ಬೆಳವಣಿಗೆಗಳು ನಡೆಯಬಾರದು. ಪತ್ರಕರ್ತರ ಮೇಲಿನ ದೌರ್ಜನ್ಯ ಆತಂಕಕಾರಿಯಾದುದು ಎಂದು ಹೇಳಿದ್ದಾರೆ.
ಇದೇ ವಿಚಾರವಾಗಿ ಏಶಿಯಾ ಕಾರ್ಯಕ್ರಮಗಳ ಸಂಯೋಜಕ ಸ್ಟೀವನ್ ಬಟ್ಲರ್ ಅವರು ಮಾತನಾಡಿ, ಮೃತ ಪತ್ರಕರ್ತ ಸಂದೀಪ್ ಶರ್ಮಾ ಮರಳು ಮಾಫಿಯಾ ಕುರಿತು ವರದಿ ಮಾಡಿದ್ದಕ್ಕೇ ಆತನನ್ನು ಕೊಲ್ಲಲಾಗಿದ್ದರೆ ಇದು ನಿಜಕ್ಕೂ ಆತಂಕಕಾರಿ. ಈ  ಬಗ್ಗೆ ಕೂಲಂಕುಷ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಅಲ್ಲದೆ ಇದು ಹತ್ಯೆಯೇ ಆಗಿದ್ದರೆ ಸ್ಥಳೀಯ ಆಡಳಿತದ ವೈಫಲ್ಯವೇ ಇದಕ್ಕೆ ಕಾರಣ ಎಂದು ಅವರು ಕಿಡಿಕಾರಿದ್ದಾರೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದ ಮರಳು ಮಾಫಿಯಾ ಕುರಿತು ಕುಟುಕು ಕಾರ್ಯಾಚರಣೆ ಮಾಡಿದ್ದ ಪತ್ರಕರ್ತ ಸಂದೀಪ್ ಶರ್ಮಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿಗದ್ದರು. ಮರಳು ಸಾಗಾಣಿಕಾ ಟ್ರಂಕ್ ವೊಂದು ಸಂದೀಪ್ ಸಂಚರಿಸುತ್ತಿದ್ದ ಬೈಕ್ ಮೇಲೆ ಹರಿದಿತ್ತು. ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳೂ ಕೂಡ ಲಭ್ಯವಾಗಿದ್ಜವು. ಈ ಘಟನೆಗೂ ಮೊದಲೇ ಪತ್ರಕರ್ತ ಸಂದೀಪ್ ತಮಗೆ ಮರಳು ಮಾಫಿಯಾದಿಂದ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT