ಮಲಾಲಾ 
ವಿದೇಶ

ಪಾಕಿಸ್ತಾನದ ತವರು ಜಿಲ್ಲೆ ಸ್ವಾತ್ ಕಣಿವೆಗೆ ಆಗಮಿಸಿದ ಮಲಾಲಾ ಯೂಸಫ್ ಝಾಯಿ

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್ ಝೈ,ಐದು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪಾಕಿಸ್ತಾನದ ತವರು ಜಿಲ್ಲೆ ಸ್ವಾತ್ ಕಣಿವೆಗೆ ಭೇಟಿ ನೀಡಿದ್ದಾರೆ.

ಇಸ್ಲಾಮಾಬಾದ್  :  ತಾಲಿಬಾನ್ ಉಗ್ರರ ದಾಳಿಯಿಂದ ತಲೆಗೆ ತೀವ್ರ ಗಾಯವಾಗಿ ಲಂಡನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ  ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್  ಝಾಯಿ, ಐದು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪಾಕಿಸ್ತಾನದ  ತವರು ಜಿಲ್ಲೆ ಸ್ವಾತ್ ಕಣಿವೆಗೆ ಭೇಟಿ ನೀಡಿದ್ದಾರೆ.

ಬಿಗಿ ಭದ್ರತೆ ನಡುವೆ ತಮ್ಮ ಪೋಷಕರೊಂದಿಗೆ ಸ್ವಾತ್ ಜಿಲ್ಲೆಯ ಖೈಬರ್ ಪಕ್ತುಂಕ್ವಾ ಪ್ರದೇಶಕ್ಕೆ ಒಂದು ದಿನಗಳ ಭೇಟಿ ನೀಡಿದ್ದು, ಸರ್ಕ್ಯೂಟ್  ಹೌಸ್ ನಲ್ಲಿ ವಾಸ್ತವ್ಯಕ್ಕೆ ವ್ಯವಸ್ತೆ ಮಾಡಲಾಗಿದೆ.ಸರ್ಕ್ಯೂಟ್  ಹೌಸ್ ಸುತ್ತಮುತ್ತ  ಪೊಲೀಸರನ್ನು ನಿಯೋಜಿಸಲಾಗಿದೆ.

ಆಕೆಯ ಪೂರ್ವಿಕರು ನೆಲೆಸಿದ್ದ ಮಿಂಗೊರಾದ ಮಾಕನ್ ಬೇಗ್ ಗೂ ಭೇಟಿ ನೀಡಲಿದ್ದು, ಸಾಂಗ್ಲಾ ಜಿಲ್ಲೆಯಲ್ಲಿ ಬಾಲಕಿಯರ ಶಾಲೆಯನ್ನು ಮಲಾಲಾ ಉದ್ಘಾಟಿಸಲಿದ್ದಾರೆ.

ವಿದ್ಯಾಭ್ಯಾಸ ಪೂರ್ಣಗೊಂಡ ನಂತರ ಪಾಕಿಸ್ತಾನಕ್ಕೆ ಮರಳಿ ಅಲ್ಲಿಯೇ ಶಾಶ್ವತವಾಗಿ ವಾಸ್ತವ್ಯ ಹೂಡಲು ಯೋಚಿಸಿರುವುದಾಗಿ ನಿನ್ನೆ ಜಿಯೋ ನ್ಯೂಸ್ ಗೆ ನೀಡಿದ್ದ ಸಂದರ್ಶನದಲ್ಲಿ ಮಲಾಲಾ ತಿಳಿಸಿದ್ದರು.

ಪಾಕಿಸ್ತಾನ ತನ್ನ ದೇಶವಾಗಿದ್ದು, ಇತರರು ಹೊಂದಿರುವ ಎಲ್ಲಾ ಹಕ್ಕುಗಳನ್ನು ತಾನೂ ಹೊಂದಿದ್ದೇನೆ.ಇಲ್ಲಿನ ಬಡ ಬಾಲಕಿಯರು ಉನ್ನತ  ಶಿಕ್ಷಣ ಪಡೆಯಬೇಕೆಂಬುದು ತಮ್ಮ ಕನಸಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದರು.

20 ವರ್ಷದ ಮಲಾಲಾ, 2012ರಲ್ಲಿ ಸ್ವಾತ್ ಕಣಿವೆಯಲ್ಲಿ  ಮಹಿಳೆಯರಿಗೆ ಶಿಕ್ಷಣ ಕುರಿತ ಪ್ರಚಾರಾಂದೋಲನದಲ್ಲಿ ಭಾಗಿಯಾದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಲಾಗಿತ್ತು. ನಂತರ ಹೆಲಿಕಾಪ್ಟರ್ ಮೂಲಕ ಬೇರೆಡೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು. ಕೋಮಾ ಸ್ಥಿತಿಗೆ ತೆರಳಿದ್ದ  ಮಲಾಲಾ ಅವರಿಗೆ ಗ್ರೇಟ್ ಬ್ರಿಟನ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಆಕೆ ಬದುಕುಳಿದ್ದರೆ ಮತ್ತೆ ದಾಳಿ ನಡೆಸುವುದಾಗಿ ತಾಲಿಬಾನ್ ಉಗ್ರ ಸಂಘಟನೆ ಎಚ್ಚರಿಕೆ ನೀಡಿತ್ತು . ಶಿಕ್ಷಣ ಕ್ಷೇತ್ರದಲ್ಲಿನ ಆಕೆಯ ಸಾಧನೆ ಪರಿಗಣಿಸಿ 17 ನೇ ವಯಸ್ಸಿನಲ್ಲಿಯೇ ಜಗತ್ತಿನ ಅತ್ಯುನ್ನತ ಪ್ರಶಸ್ತಿಯಾದ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಲಾಲಾ ಭಾಜನರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT