ಸಂಗ್ರಹ ಚಿತ್ರ 
ವಿದೇಶ

ಟೆಕಿ ಶ್ರೀನಿವಾಸ್ ಕುಚಿಬೋಟ್ಲಾ ಹತ್ಯೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಹತ್ಯೆ ಅಪರಾಧಿ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.

ವಾಷಿಂಗ್ಟನ್: ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಹತ್ಯೆ ಅಪರಾಧಿ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
ಜನಾಂಗೀಯ ದ್ವೇಷದಿಂದ ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿದ್ದ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿ ಆ್ಯಡಂ ಪುರಿಂಟನ್ (52 ವರ್ಷ)ಗೆ ಅಮೆರಿಕ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಶ್ರೀನಿವಾಸ್ ಕುಚಿಬೋಟ್ಲಾ ಅವರ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆಯಲ್ಲಿ ಆತ ಅಪರಾಧಿ ಎಂದು ಸಾಬೀತಾಗಿತ್ತು. ಇದೀಗ ಅಪರಾಧಿ ಪುರಿಂಟನ್ ಗೆ ಅಮೆರಿಕ ನ್ಯಾಯಾಲಯ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಅಪರಾಧಿ ಪುರಿಂಟನ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಅಂತೆಯೇ ಬಂಧಿತ ಅಪರಾಧಿಗೆ ಪೆರೋಲ್ ಕೂಡ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 
ಈ  ಹಿಂದೆ ಒಲಾಥೆ ನಗರದ ಬಾರ್ ವೊಂದರಲ್ಲಿ ಮದ್ಯ ಸೇವಿಸುತ್ತಿದ್ದ ಪುರಿಂಟನ್ ಅಲ್ಲಿಯೇ ಇದ್ದ ಭಾರತ ಮೂಲದ ಟೆಕ್ಕಿಗಳಾದ ಶ್ರೀನಿವಾಸ್ ಕುಚಿ ಬೋಟ್ಲಾ ಮತ್ತು ಆತನ ಸ್ನೇಹಿತ ಅಲೋಕ್ ಮದಸನಿ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದರು. ಅಲ್ಲದೆ ನನ್ನ ದೇಶ ಬಿಟ್ಟು ತೊಲಗುವಂತೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ವಾಗ್ವಾದ ನಡೆದಾಗ ಆಕ್ರೋಶಿತ ಪುರಿಂಟನ್ ತನ್ನ ಪಿಸ್ತೂಲ್ ನಿಂದ ಶ್ರೀನಿವಾಸ್ ಮೇಲೆ ಗುಂಡು ಹಾರಿಸಿಕೊಂದು ಹಾಕಿದ್ದರು. ಬಳಿಕ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದಿದ್ದರು.
ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಕ್ಯಾನ್ಸಾಸ್ ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದರು. ಕಳೆದ ಮಾರ್ಚ್ ನಲ್ಲಿ ನಡೆದ ವಿಚಾರಣೆಯಲ್ಲಿ ಪುರಿಂಟನ್ ಅಪರಾಧಿ ಎಂದು ಸಾಬೀತಾಗಿತ್ತು. ಇದೀಗ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇನ್ನು ಪ್ರಕರಣ ಸಂಬಂಧ ಈ ಹಿಂದೆ ಹೇಳಿಕೆ ನೀಡಿದ್ದ ಶ್ರೀನಿವಾಸ್ ಪತ್ನಿ ಸುನಯನಾ ದುಮಲಾ ಅವರು, ಹಂತಕನಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ದ್ವೇಷವನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಬೇಕಿದೆ. ಒಬ್ಬ ವ್ಯಕ್ತಿಯ ಮೇಲೆ ಮತ್ತೊಬ್ಬರು ಇಟ್ಟಿರುವ ಪ್ರೀತಿಯನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT