ಸಂಗ್ರಹ ಚಿತ್ರ 
ವಿದೇಶ

ಟೆಕಿ ಶ್ರೀನಿವಾಸ್ ಕುಚಿಬೋಟ್ಲಾ ಹತ್ಯೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಹತ್ಯೆ ಅಪರಾಧಿ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.

ವಾಷಿಂಗ್ಟನ್: ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಹತ್ಯೆ ಅಪರಾಧಿ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
ಜನಾಂಗೀಯ ದ್ವೇಷದಿಂದ ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿದ್ದ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿ ಆ್ಯಡಂ ಪುರಿಂಟನ್ (52 ವರ್ಷ)ಗೆ ಅಮೆರಿಕ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಶ್ರೀನಿವಾಸ್ ಕುಚಿಬೋಟ್ಲಾ ಅವರ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆಯಲ್ಲಿ ಆತ ಅಪರಾಧಿ ಎಂದು ಸಾಬೀತಾಗಿತ್ತು. ಇದೀಗ ಅಪರಾಧಿ ಪುರಿಂಟನ್ ಗೆ ಅಮೆರಿಕ ನ್ಯಾಯಾಲಯ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಅಪರಾಧಿ ಪುರಿಂಟನ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಅಂತೆಯೇ ಬಂಧಿತ ಅಪರಾಧಿಗೆ ಪೆರೋಲ್ ಕೂಡ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 
ಈ  ಹಿಂದೆ ಒಲಾಥೆ ನಗರದ ಬಾರ್ ವೊಂದರಲ್ಲಿ ಮದ್ಯ ಸೇವಿಸುತ್ತಿದ್ದ ಪುರಿಂಟನ್ ಅಲ್ಲಿಯೇ ಇದ್ದ ಭಾರತ ಮೂಲದ ಟೆಕ್ಕಿಗಳಾದ ಶ್ರೀನಿವಾಸ್ ಕುಚಿ ಬೋಟ್ಲಾ ಮತ್ತು ಆತನ ಸ್ನೇಹಿತ ಅಲೋಕ್ ಮದಸನಿ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದರು. ಅಲ್ಲದೆ ನನ್ನ ದೇಶ ಬಿಟ್ಟು ತೊಲಗುವಂತೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ವಾಗ್ವಾದ ನಡೆದಾಗ ಆಕ್ರೋಶಿತ ಪುರಿಂಟನ್ ತನ್ನ ಪಿಸ್ತೂಲ್ ನಿಂದ ಶ್ರೀನಿವಾಸ್ ಮೇಲೆ ಗುಂಡು ಹಾರಿಸಿಕೊಂದು ಹಾಕಿದ್ದರು. ಬಳಿಕ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದಿದ್ದರು.
ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಕ್ಯಾನ್ಸಾಸ್ ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದರು. ಕಳೆದ ಮಾರ್ಚ್ ನಲ್ಲಿ ನಡೆದ ವಿಚಾರಣೆಯಲ್ಲಿ ಪುರಿಂಟನ್ ಅಪರಾಧಿ ಎಂದು ಸಾಬೀತಾಗಿತ್ತು. ಇದೀಗ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇನ್ನು ಪ್ರಕರಣ ಸಂಬಂಧ ಈ ಹಿಂದೆ ಹೇಳಿಕೆ ನೀಡಿದ್ದ ಶ್ರೀನಿವಾಸ್ ಪತ್ನಿ ಸುನಯನಾ ದುಮಲಾ ಅವರು, ಹಂತಕನಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ದ್ವೇಷವನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಬೇಕಿದೆ. ಒಬ್ಬ ವ್ಯಕ್ತಿಯ ಮೇಲೆ ಮತ್ತೊಬ್ಬರು ಇಟ್ಟಿರುವ ಪ್ರೀತಿಯನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT