ನೇಪಾಳ ಪ್ರವಾಸದಲ್ಲಿ ಪ್ರಧಾನಿ ಮೋದಿ; ಜನಕಪುರ-ಅಯೋಧ್ಯಾ ಬಸ್ ಸೇವೆಗೆ ಚಾಲನೆ 
ವಿದೇಶ

ನೇಪಾಳ ಪ್ರವಾಸದಲ್ಲಿ ಪ್ರಧಾನಿ ಮೋದಿ; ಜನಕಪುರ-ಅಯೋಧ್ಯಾ ಬಸ್ ಸೇವೆಗೆ ಚಾಲನೆ

2 ದಿನಗಳ ಕಾಲ ನೇಪಾಳ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡಿ ಜನಕಪುರ-ಅಯೋಧ್ಯೆ ನಡುವಿನ ಬಸ್ ಸೇವೆಯನ್ನು ಉದ್ಘಾಟಿಸಿದ್ದಾರೆ...

ಕಠ್ಮಂಡು: 2 ದಿನಗಳ ಕಾಲ ನೇಪಾಳ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡಿ ಜನಕಪುರ-ಅಯೋಧ್ಯೆ ನಡುವಿನ ಬಸ್ ಸೇವೆಯನ್ನು ಉದ್ಘಾಟಿಸಿದ್ದಾರೆ. 
ಜನಕಪುರ-ಅಯೋಧ್ಯೆ ನಡುವಿನ ಬಸ್ ಸೇವೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿರುವ ಮೋದಿಯವರು, ಜನಕಪುರ ಹಾಗೂ ಅಯೋಧ್ಯೆ ನಡುವೆ ಸಂಪರ್ಕ ಏರ್ಪಟ್ಟಿದೆ. ಇದೊಂದು ಐತಿಹಾಸಿಕ ಕ್ಷಣ ಎಂದು ಹೇಳಿದ್ದಾರೆ. 
ರಾಮಾಯಣ ಸರ್ಕ್ಯೂಟ್ ನಲ್ಲಿ ಭಾರತ ಸರ್ಕಾರ ದೇಶದ 15 ಸ್ಥಳಗಳನ್ನು ಗುರ್ತಿಸಲಾಗಿದೆ. ಇದರಲ್ಲಿ ಉತ್ತರಪ್ರದೇಶದ ಅಯೋಧ್ಯೆ, ನಂದಿ ಗ್ರಾಮ್, ಶೃಂಗವೇರ್ ಪುರ ಮತ್ತು ಚಿತ್ರಕೂಟ, ಬಿಹಾರದ ಸೀತಾಮಡಿ, ಬಕ್ಸರ್ ಮತ್ತು ದರ್ಭಂಗಾ, ಮಧ್ಯಪ್ರದೇಶದ ಚಿತ್ರಕೂಟ, ಒಡಿಸಾದ ಮಹೇಂದ್ರ ಗಿರಿ, ಛತ್ತೀಸ್ಗಢದ ಜಗದಾಲ್ ಪುರ, ಮಹಾರಾಷ್ಟ್ರದ ನಾಶಿಕ್ ಮತ್ತು ನಾಗಪುರ, ತೆಲಂಗಾಣದ ಭದ್ರಾಚಲಮ್, ಹಾಗೂ ತಮಿಳುನಾಡಿನ ರಾಮೇಶ್ವರಂ, ಕರ್ನಾಟಕದ ಹಂಪಿ ರಾಮಾಯಣ ಸರ್ಕ್ಯೂಟ್ ನಲ್ಲಿವೆ ಎಂದು ಹೇಳಿದ್ದಾರೆ. 
ಮಾತಾ ಜಾನಕಿಯ ಜನ್ಮ ಸ್ಥಳಕ್ಕೆ ಭೇಟಿ ನೀಡಲು ನನಗೆ ಸಿಕ್ಕಿರುವ ಅವಕಾಶದಿಂದ ನಾನು ಧನ್ಯನಾಗಿದ್ದೇನೆ. ಭಾರತ ಮತ್ತು ನೇಪಾಳ ಉಭಯ ರಾಷ್ಟ್ರಗಳ ನಡುವಿನ ರಾಮಾಯಣ ವರ್ತುಲವನ್ನು ನಿರ್ಮಿಸುವಲ್ಲಿ ಜೊತೆಗೂಡಿ ಶ್ರಮಿಸಬೇಕಿದೆ. ಜನಕಪುರ ಭೇಟಿ ವೇಳೆ ನನ್ನೊಂದಿಗೆ ಸಾಥ್ ನೀಡಿದ ನೇಪಾಳ ಪ್ರಧಾನಮಂತ್ರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ಹೇಳುತ್ತೇನೆ. 
ನೇಪಾಳದ ನನಗೆ ಸ್ವಾಗತ ಕೋರಿದ ರೀತಿಯ ಭಾರತೀಯ ಜನರ ಮೇಲೆ ನೇಪಾಳಕ್ಕಿರುವ ಪ್ರೀತಿಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT