ದೇವಸ್ತಾನ 
ವಿದೇಶ

ಪಾಕ್‌ನಲ್ಲಿರುವ ಕೃಷ್ಣ ದೇವಸ್ತಾನ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರದಿಂದ 20 ಮಿಲಿಯನ್ ಬಿಡುಗಡೆ!

ರಾವಲ್ಪಿಂಡಿ ನಗರದಲ್ಲಿರುವ ಕೃಷ್ಣನ ದೇವಸ್ತಾನದ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಿದೆ...

ಇಸ್ಲಾಮಾಬಾದ್: ರಾವಲ್ಪಿಂಡಿ ನಗರದಲ್ಲಿರುವ ಕೃಷ್ಣನ ದೇವಸ್ತಾನದ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಿದೆ. 
ದೇವಸ್ತಾನದಲ್ಲಿ ನಡೆಯುವ ಉತ್ಸವಗಳು ಮತ್ತು ಧಾರ್ಮಿಕ ಆರಚಣೆ ಸಮಯದಲ್ಲಿ ಹಿಂದೂ ಭಕ್ತರಿಗೆ ಸೌಕರ್ಯವನ್ನು ಹೆಚ್ಚಿಸು ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ. 
ಇನ್ನು ರಾವಲ್ಪಿಂಡಿ ಮತ್ತು ಇಸ್ಲಾಮಾಬಾದ್ ಅವಳಿ ನಗರಗಳಲ್ಲಿ ಇದೊಂದು ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ಅವರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಇಟಿಪಿಬಿ ಉಪ ಆಡಳಿತಾಧಿಕಾರಿ ಮೊಹಮ್ಮದ್ ಆಸೀಫ್ ಹೇಳಿದ್ದಾರೆ. 
ಪ್ರಾಂತೀಯ ಅಸೆಂಬ್ಲಿಯ ಸದಸ್ಯರು ಮನವಿ ಮೇರೆಗೆ ಆಸೀಫ್ ಅವರು ಈಗಾಗಲೇ ದೇವಸ್ತಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ತಾನ ವಿಸ್ತರಣೆ ಹಿನ್ನೆಲೆಯಲ್ಲಿ ದೇವಸ್ತಾನದಲ್ಲಿದ್ದ ವಿಗ್ರಹಗಳನ್ನು ಕೊಠಡಿಯೊಂದರಲ್ಲಿ ಇರಿಸಲಾಗಿದೆ. ಒಂದೊಮ್ಮೆ ನಿರ್ಮಾಣ ಕಾರ್ಯ ಮುಕ್ತಾಯಗೊಂಡ ನಂತರ ಹೆಚ್ಚಿನ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು. 
ಸ್ಥಳೀಯ ಹಿಂದೂಗಳ ಬೇಡಿಕೆ ಅನುಸರಿಸಿ ಪಂಜಾಬ್ ಸರ್ಕಾರ ಹಣವನ್ನು ಬಿಡುಗಡೆ ಮಾಡಿದೆ ಎಂದು ಜಗ್ ಮೋಹನ್ ಅರೋರಾ ಹೇಳಿದ್ದಾರೆ. ಪ್ರಸ್ತುತ ದೇವಸ್ತಾನ ತುಂಬಾ ಚಿಕ್ಕದಾಗಿದೆ. ಹೀಗಾಗಿ ದೇವಸ್ತಾನದ ವಿಸ್ತರಣೆಗೆ ಮನವಿ ಮಾಡಲಾಗಿತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT