ದೇವಸ್ತಾನ 
ವಿದೇಶ

ಪಾಕ್‌ನಲ್ಲಿರುವ ಕೃಷ್ಣ ದೇವಸ್ತಾನ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರದಿಂದ 20 ಮಿಲಿಯನ್ ಬಿಡುಗಡೆ!

ರಾವಲ್ಪಿಂಡಿ ನಗರದಲ್ಲಿರುವ ಕೃಷ್ಣನ ದೇವಸ್ತಾನದ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಿದೆ...

ಇಸ್ಲಾಮಾಬಾದ್: ರಾವಲ್ಪಿಂಡಿ ನಗರದಲ್ಲಿರುವ ಕೃಷ್ಣನ ದೇವಸ್ತಾನದ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಿದೆ. 
ದೇವಸ್ತಾನದಲ್ಲಿ ನಡೆಯುವ ಉತ್ಸವಗಳು ಮತ್ತು ಧಾರ್ಮಿಕ ಆರಚಣೆ ಸಮಯದಲ್ಲಿ ಹಿಂದೂ ಭಕ್ತರಿಗೆ ಸೌಕರ್ಯವನ್ನು ಹೆಚ್ಚಿಸು ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ. 
ಇನ್ನು ರಾವಲ್ಪಿಂಡಿ ಮತ್ತು ಇಸ್ಲಾಮಾಬಾದ್ ಅವಳಿ ನಗರಗಳಲ್ಲಿ ಇದೊಂದು ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ಅವರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಇಟಿಪಿಬಿ ಉಪ ಆಡಳಿತಾಧಿಕಾರಿ ಮೊಹಮ್ಮದ್ ಆಸೀಫ್ ಹೇಳಿದ್ದಾರೆ. 
ಪ್ರಾಂತೀಯ ಅಸೆಂಬ್ಲಿಯ ಸದಸ್ಯರು ಮನವಿ ಮೇರೆಗೆ ಆಸೀಫ್ ಅವರು ಈಗಾಗಲೇ ದೇವಸ್ತಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ತಾನ ವಿಸ್ತರಣೆ ಹಿನ್ನೆಲೆಯಲ್ಲಿ ದೇವಸ್ತಾನದಲ್ಲಿದ್ದ ವಿಗ್ರಹಗಳನ್ನು ಕೊಠಡಿಯೊಂದರಲ್ಲಿ ಇರಿಸಲಾಗಿದೆ. ಒಂದೊಮ್ಮೆ ನಿರ್ಮಾಣ ಕಾರ್ಯ ಮುಕ್ತಾಯಗೊಂಡ ನಂತರ ಹೆಚ್ಚಿನ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು. 
ಸ್ಥಳೀಯ ಹಿಂದೂಗಳ ಬೇಡಿಕೆ ಅನುಸರಿಸಿ ಪಂಜಾಬ್ ಸರ್ಕಾರ ಹಣವನ್ನು ಬಿಡುಗಡೆ ಮಾಡಿದೆ ಎಂದು ಜಗ್ ಮೋಹನ್ ಅರೋರಾ ಹೇಳಿದ್ದಾರೆ. ಪ್ರಸ್ತುತ ದೇವಸ್ತಾನ ತುಂಬಾ ಚಿಕ್ಕದಾಗಿದೆ. ಹೀಗಾಗಿ ದೇವಸ್ತಾನದ ವಿಸ್ತರಣೆಗೆ ಮನವಿ ಮಾಡಲಾಗಿತ್ತು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌