ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ 
ವಿದೇಶ

ಕರ್ನಾಟಕದಲ್ಲಿ ಸೋತಿದ್ದರೂ, ಬಿಜೆಪಿ ಜನರ ಸಹಾನುಭೂತಿ ಗಳಿಸಿದೆ: ರಾಜ್ಯಸಭಾ ಸಂಸದ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧವಿರಲಿಲ್ಲ. ಸರ್ಕಾರ ರಚನೆಯಲ್ಲಿ ವಿಫಲವಾಗಿರಬಹುದು, ಆದರೆ, ಬಿಜೆಪಿ ಜನರ ಸಹಾನುಭೂತಿಯನ್ನು ಗಳಿಸಿದೆ ಎಂದು ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಹೇಳಿದ್ದಾರೆ...

ನ್ಯೂಯಾರ್ಕ್: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧವಿರಲಿಲ್ಲ. ಸರ್ಕಾರ ರಚನೆಯಲ್ಲಿ ವಿಫಲವಾಗಿರಬಹುದು, ಆದರೆ, ಬಿಜೆಪಿ ಜನರ ಸಹಾನುಭೂತಿಯನ್ನು ಗಳಿಸಿದೆ ಎಂದು ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಹೇಳಿದ್ದಾರೆ.
ಅಮೆರಿಕಾಗೆ ಖಾಸಗಿ ಭೇಟಿ ನೀಡಿರುವ ಅವರು, ಇದೇ ವೇಳೆ ಯುಎನ್ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. 
ಕರ್ನಾಟಕದ ಜನಾದೇಶ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧವಿತ್ತು. ಬಿಜೆಪಿಗೆ ಜನರು ಬೆಂಬಲ ನೀಡಿದ್ದರು. ಆದರೆ, ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆ ಮಾಡುತ್ತಿದೆ. ಸರ್ಕಾರ ರಚಿಸುವಲ್ಲಿ ಬಿಜೆಪಿ ವಿಫಲವಾಗಿರಬಹುದು. ಆದರೆ, ಜನರ ಸಹಾನುಭೂತಿ, ಮನಸ್ಸನ್ನು ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ. 
ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಗೆಲವು ಸಾಧಿಸಲಿದ್ದು, ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT