ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ 
ವಿದೇಶ

ಕರ್ನಾಟಕದಲ್ಲಿ ಸೋತಿದ್ದರೂ, ಬಿಜೆಪಿ ಜನರ ಸಹಾನುಭೂತಿ ಗಳಿಸಿದೆ: ರಾಜ್ಯಸಭಾ ಸಂಸದ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧವಿರಲಿಲ್ಲ. ಸರ್ಕಾರ ರಚನೆಯಲ್ಲಿ ವಿಫಲವಾಗಿರಬಹುದು, ಆದರೆ, ಬಿಜೆಪಿ ಜನರ ಸಹಾನುಭೂತಿಯನ್ನು ಗಳಿಸಿದೆ ಎಂದು ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಹೇಳಿದ್ದಾರೆ...

ನ್ಯೂಯಾರ್ಕ್: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧವಿರಲಿಲ್ಲ. ಸರ್ಕಾರ ರಚನೆಯಲ್ಲಿ ವಿಫಲವಾಗಿರಬಹುದು, ಆದರೆ, ಬಿಜೆಪಿ ಜನರ ಸಹಾನುಭೂತಿಯನ್ನು ಗಳಿಸಿದೆ ಎಂದು ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಹೇಳಿದ್ದಾರೆ.
ಅಮೆರಿಕಾಗೆ ಖಾಸಗಿ ಭೇಟಿ ನೀಡಿರುವ ಅವರು, ಇದೇ ವೇಳೆ ಯುಎನ್ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. 
ಕರ್ನಾಟಕದ ಜನಾದೇಶ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧವಿತ್ತು. ಬಿಜೆಪಿಗೆ ಜನರು ಬೆಂಬಲ ನೀಡಿದ್ದರು. ಆದರೆ, ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆ ಮಾಡುತ್ತಿದೆ. ಸರ್ಕಾರ ರಚಿಸುವಲ್ಲಿ ಬಿಜೆಪಿ ವಿಫಲವಾಗಿರಬಹುದು. ಆದರೆ, ಜನರ ಸಹಾನುಭೂತಿ, ಮನಸ್ಸನ್ನು ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ. 
ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಗೆಲವು ಸಾಧಿಸಲಿದ್ದು, ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT