ಲಂಕಾ ಸಂಸತ್ ಕಲಾಪ ರದ್ದು ಆದೇಶ ವಾಪಸ್ ಪಡೆದ ಅಧ್ಯಕ್ಷ ಸಿರಿಸೇನ: ನ.05 ರಿಂದ ಕಲಾಪ ಮತ್ತೆ ಆರಂಭ 
ವಿದೇಶ

ಲಂಕಾ ಸಂಸತ್ ಕಲಾಪ ರದ್ದು ಆದೇಶ ವಾಪಸ್ ಪಡೆದ ಅಧ್ಯಕ್ಷ ಸಿರಿಸೇನ: ನ.05 ರಿಂದ ಕಲಾಪ ಮತ್ತೆ ಆರಂಭ

ಲಂಕಾದಲ್ಲಿ ಪ್ರಧಾನಿ ರಾನಿಲ್​ ವಿಕ್ರಮಸಿಂಘೆಯ ಪದಚ್ಯುತಿಯಿಂದ ಉಂಟಾಗಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಂಸತ್ ಕಾರ್ಯಕಲಾಪ ರದ್ದು ಆದೇಶವನ್ನು ಲಂಕಾ ಅಧ್ಯಕ್ಷ ಮೈತ್ರಿಪಾಲ ಹಿಂಪಡೆದಿದ್ದಾರೆ.

ಕೊಲಂಬೊ: ಲಂಕಾದಲ್ಲಿ ಪ್ರಧಾನಿ ರಾನಿಲ್​ ವಿಕ್ರಮಸಿಂಘೆಯ ಪದಚ್ಯುತಿಯಿಂದ ಉಂಟಾಗಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ  ಸಂಸತ್ ಕಾರ್ಯಕಲಾಪ ರದ್ದು ಆದೇಶವನ್ನು ಲಂಕಾ ಅಧ್ಯಕ್ಷ ಮೈತ್ರಿಪಾಲ ಹಿಂಪಡೆದಿದ್ದಾರೆ. 
ರದ್ದತಿ ಆದೇಶವನ್ನು ವಾಪಸ್ ಪಡೆದಿರುವ ಸಿರಿಸೇನಾ, ನ.೦5 ಕ್ಕೆ ಲಂಕಾ ಸಂಸತ್ ಕಲಾಪಕ್ಕೆ ಕರೆ ನೀಡಿದ್ದಾರೆ. ಪ್ರಧಾನಿ ಹುದ್ದೆ ಸಂಬಂಧ ರಾನಿಲ್​ ವಿಕ್ರಮಸಿಂಘೆ ಹಾಗೂ ರಾಜಪಕ್ಸೆ ಅವರ ನಡುವಿನ ತಿಕ್ಕಾಟ ನ.05 ರ ಕಲಾಪದಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಇದೆ. ರಾಜಕೀಯ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಸಂಸತ್ ತುರ್ತು ಕಲಾಪವನ್ನು ನವೆಂಬರ್​ 16ರ ವರೆಗೆ ಅಮಾನತುಗೊಳಿಸಿ ಆದೇಶ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT