ಸಾಂದರ್ಭಿಕ ಚಿತ್ರ 
ವಿದೇಶ

ಭಾರತ, ಚೀನಾ ಸೇರಿ 8 ರಾಷ್ಟ್ರಗಳು ಇರಾನ್ ತೈಲ ಖರೀದಿಸಲು ಒಪ್ಪಿಗೆ: ಅಮೆರಿಕ

ಭಾರತ ಹಾಗೂ ಚೀನಾ ಸೇರಿದಂತೆ ಎಂಟು ರಾಷ್ಟ್ರಗಳು ಇರಾನ್ ನಿಂದ ತೈಲ ಖರೀದಿಸಲು ಅಮೆರಿಕದ ನಿರ್ಬಂಧದಿಂದ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂದು ಸೋಮವಾರ...

ವಾಷಿಂಗ್ಟನ್: ಭಾರತ ಹಾಗೂ ಚೀನಾ ಸೇರಿದಂತೆ  ಎಂಟು ರಾಷ್ಟ್ರಗಳು ಇರಾನ್ ನಿಂದ ತೈಲ ಖರೀದಿಸಲು ಅಮೆರಿಕದ ನಿರ್ಬಂಧದಿಂದ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂದು ಸೋಮವಾರ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪ್ಯಾಂಪೊ ಅವರು ಹೇಳಿದ್ದಾರೆ.
ಇರಾನ್‌ ಮೇಲೆ ನಿರ್ಬಂಧ ಹೇರಿದ ಬಳಿಕ ಈ ಎಂಟು ದೇಶಗಳು ಅಲ್ಲಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ತಗ್ಗಿಸಿದ್ದರಿಂದ ಈ ವಿನಾಯ್ತಿ ನೀಡಲಾಗಿದೆ ಎಂದು ಮೈಕ್‌ ಪ್ಯಾಂಪೊ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 
ಭಾರತ, ಚೀನಾ, ಇಟಲಿ, ಗ್ರೀಸ್, ದಕ್ಷಿಣ ಕೊರಿಯಾ, ತೈವಾನ್ ಹಾಗೂ ಟರ್ಕಿ ದೇಶಗಳಿಗೆ ಅಮೆರಿಕದ ನಿರ್ಬಂಧದಿಂದ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂದು ಮೈಕ್ ಹೇಳಿದ್ದಾರೆ.
ಅಮೆರಿಕ ವಿಧಿಸಿರುವ ನಿರ್ಬಂಧಗಳು ನವೆಂಬರ್ ನಿನ್ನೆಯಿಂದ ಜಾರಿಗೆ ಬಂದಿದ್ದು, ನಿರ್ಬಂಧದ ನಂತರವೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಭಾರತ ಅವಕಾಶ ಪಡೆದಿದ್ದರಿಂದ ದೇಶದಲ್ಲಿ ತೈಲ ದರ ಸ್ವಲ್ಪಮಟ್ಟಿಗೆ ಇಳಿಕೆಯಾಗುವ ಸಾಧ್ಯತೆಯಿದೆ.  
ವಿನಾಯ್ತಿ ಪಡೆದಿರುವ ಎಲ್ಲ ದೇಶಗಳೂ ಏಷ್ಯಾ ಖಂಡದ ರಾಷ್ಟ್ರಗಳಾಗಿದ್ದು, ಇರಾನ್‌ನಿಂದ ಹೇರಳ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ರಾಷ್ಟ್ರಗಳಾಗಿವೆ. 
2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಅದು ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು.
ನಿರ್ಬಂಧದ ಮೊದಲ ಹಂತ ಈಗಾಗಲೇ ಜಾರಿಯಲ್ಲಿದ್ದು, ಅದು ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಈ ಅವಧಿಯಲ್ಲಿ ಭಾರತ ಸೇರಿದಂತೆ ಎಲ್ಲ ದೇಶಗಳೂ ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣ ಸ್ಥಗಿತಗೊಳಿಸಲಿವೆ ಎಂದು ಅಮೆರಿಕ ನಿರೀಕ್ಷಿಸಿತ್ತು. ಆದರೆ ಅಂತಿಮವಾಗಿ ಭಾರತ ಇರಾನ್ ನಿಂದ ತೈಲ ಆಮದು ಮುಂದುವರೆಸಲು ಅವಕಾಶ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT