ಬಲೂಚಿಸ್ಥಾನದಲ್ಲಿ ಉಲ್ಭಣಗೊಂಡ ಹಿಂಸಾಚಾರ: ಪ್ರಧಾನಿ ಮೋದಿ ದೂಷಿಸಿದ ಪಾಕಿಸ್ತಾನ 
ವಿದೇಶ

ಬಲೂಚಿಸ್ಥಾನದಲ್ಲಿ ಉಲ್ಭಣಗೊಂಡ ಹಿಂಸಾಚಾರ: ಪ್ರಧಾನಿ ಮೋದಿ ದೂಷಿಸಿದ ಪಾಕಿಸ್ತಾನ

ಬಲೂಚಿಸ್ಥಾನದಲ್ಲಿ ಹಿಂಸಾಚಾರ ಉಲ್ಬಣಗೊಳ್ಳುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಪಾಕಿಸ್ತಾನ ಆರೋಪ ಮಾಡಿದೆ.

ಇಸ್ಲಾಮಾಬಾದ್: ಬಲೂಚಿಸ್ಥಾನದಲ್ಲಿ ಹಿಂಸಾಚಾರ ಉಲ್ಬಣಗೊಳ್ಳುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಪಾಕಿಸ್ತಾನ ಆರೋಪ ಮಾಡಿದೆ. 
ಅಲ್ಲಿನ ಫೆಡರಲ್ ಪ್ಯಾರಾ ಮಿಲಿಟರಿ ಪಡೆಯ ಭಾಗವಾಗಿರುವ ಫ್ರಂಟಿಯರ್ ಕಾರ್ಪ್ಸ್ ಆಫ್ ಬಲೂಚಿಸ್ಥಾನ್ ಪಾಕಿಸ್ತಾನದ ಸೆನೆಟ್ ಗೆ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಮಾಹಿತಿ ನೀಡಿದೆ. ಡಾನ್ ಪತ್ರಿಕೆ ವರದಿಯ ಪ್ರಕಾರ ಬಲೂಚಿಸ್ಥಾನ ಫ್ರಂಟಿಯರ್ ಕಾರ್ಪ್ಸ್ ಮೇಜರ್ ಜನರಲ್ ನದೀಮ್ ಅಂಜುಮನ್ ನಮ್ಮ ದೇಶದ ಶತ್ರುಗಳು ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಹಿಂಸಾಚಾರವನ್ನು ಹೆಚ್ಚಿಸುತ್ತಿದ್ದು, ಆ ಪ್ರಾಂತ್ಯವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲು ವಿಶ್ವಸಂಸ್ಥೆ ಮಧ್ಯಪ್ರವೇಶವನ್ನು ಬಲವಾಗಿ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. 
ವಿದೇಶಿ ಮಾಧ್ಯಮಗಳು ಬಾಲಿವುಡ್ ಹಾಗೂ ಹಾಲಿವುಡ್ ಸಿನಿಮಾಗಳನ್ನು ಬಳಸಿಕೊಂದು ಬಲೂಚಿಸ್ಥಾನದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಎಂದು ಹೇಳುತ್ತಿದೆ.  ಲಿಬಿಯಾ ಹಾಗೂ ಯೆಮೆನ್ ಮಾದರಿಯಲ್ಲಿ ಪರಿಸ್ಥಿಯನ್ನು ಬಳಸಿಕೊಂಡು ಬಲೂಚಿಸ್ಥಾನದಲ್ಲಿ ಅಸ್ಥಿರತೆ ಉಂಟು ಮಾಡಲು ಯತ್ನಿಸಲಾಗುತ್ತಿದೆ ಎಂದು ನದೀಮ್ ಆರೋಪಿಸಿದ್ದಾರೆ. 
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ನದೀಮ್, ಭಾರತದ ರಾ ಹಾಗೂ ಅಫ್ಘಾನಿಸ್ತಾನದ ಗುಪ್ತಚರ ಸಂಸ್ಥೆಗಳು ಬಲೂಚಿಸ್ಥಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿವೆ ಎಂದು ಆರೋಪಿಸಿದ್ದಾರೆ.  ಬಲೂಚಿಸ್ಥಾನದಲ್ಲಿ ಭಾರತ ಸರ್ಕಾರದ ಹಸ್ತಕ್ಷೇಪ ಇರುವುದನ್ನು ಅಲ್ಲಿನ ಪ್ರಧಾನಿ ನರೇಂದ್ರ ಮೋದಿಯೇ ಒಪ್ಪಿಕೊಂಡಿದ್ದಾರೆ ಎಂದು ನದೀಮ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT