ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು 
ವಿದೇಶ

ಫ್ರಾನ್ಸ್ ನಲ್ಲಿ ಭಾರತದಿಂದ ನಿರ್ಮಿಸಿರುವ ಯುದ್ಧ ಸ್ಮಾರಕ ಉದ್ಘಾಟಿಸಿದ ವೆಂಕಯ್ಯನಾಯ್ಡು

ಉತ್ತರ ಫ್ರಾನ್ಸ್ ನಲ್ಲಿ ಭಾರತದಿಂದ ಮೊದಲ ಬಾರಿಗೆ ನಿರ್ಮಿಸಿರುವ ಯುದ್ಧ ಸ್ಮಾರಕವನ್ನು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು ಉದ್ಘಾಟಿಸಿದರು.

ಫ್ರಾನ್ಸ್ : ಫ್ರಾನ್ಸ್ ನ ಸ್ವಾತಂತ್ರ್ಯಕ್ಕಾಗಿ ನಡೆದ ಮೊದಲ ಮಹಾಯುದ್ಧದಲ್ಲಿ ನಿಸ್ವಾರ್ಥದಿಂದ ಹೋರಾಡಿ ಹುತಾತ್ಮರಾದ ಸಾವಿರಾರು ಭಾರತದ ಸೈನಿಕರ ಸ್ಮರಣಾರ್ಥ ಉತ್ತರ ಫ್ರಾನ್ಸ್ ನಲ್ಲಿ ಭಾರತದಿಂದ  ಮೊದಲ ಬಾರಿಗೆ ನಿರ್ಮಿಸಿರುವ ಯುದ್ಧ ಸ್ಮಾರಕವನ್ನು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು ಉದ್ಘಾಟಿಸಿದರು.

ಮೂರು ದಿನಗಳ ಪ್ಯಾರಿಸ್ ಪ್ರವಾಸದಲ್ಲಿರುವ ವೆಂಕಯ್ಯನಾಯ್ಡು ವಿಲಿಯರ್ಸ್ ಗಿಸ್ಲಿನ್ ಬಳಿ ಯುದ್ಧ ಸ್ಮಾರಕ ಉದ್ಘಾಟಿಸಿ ಫ್ರೆಂಚ್ ಸಶಸ್ತ್ರ ಪಡೆಗಳ ಪರಿಣತರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿದರು.

ಸಾವಿರಾರು ಸೈನಿಕರ  ಸಮರ್ಪಣೆ ವಿಶ್ವಾದ್ಯಂತ ಮಾನ್ಯತೆ ಪಡೆದಿದ್ದು,ಅವರ ಸ್ಮರಣಾರ್ಥ ನಿರ್ಮಿಸಿರುವ ಯುದ್ಧ ಸ್ಮಾರಕ ಉದ್ಘಾಟನೆ ಮಾಡಿದದ್ದು ತಮಗೆ ಅತೀವ ಸಂತೋಷವನ್ನುಂಟುಮಾಡಿದೆ ಎಂದು ವೆಂಕಯ್ಯನಾಯ್ಡು  ತಿಳಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಕಳೆದ ಬಾರಿ ಪ್ಯಾರಿಸ್ ಗೆ  ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಯುದ್ಧ ಸ್ಮಾರಕ ನಿರ್ಮಾಣದ ಘೋಷಣೆ ಮಾಡಿದ್ದರು.

ಭಾರತದ ಯೋಧರು ಫ್ರಾನ್ಸ್, ಬೆಲ್ಜಿಯಂ, ಅರಬೀಯಾ, ಸೇರಿದಂತೆ ವಿಶ್ವದಾದ್ಯಂತ ಯುದ್ಧಭೂಮಿಯಲ್ಲಿ ಹೋರಾಟ ನಡೆಸಿದ್ದು, ಫ್ರಾನ್ಸ್ ಮಣ್ಣು ಮತ್ತು ಸಮಾಜದೊಂದಿಗೆ ಬಾಂಧವ್ಯ ಹಂಚಿಕೊಂಡಿರುವುದಾಗಿ ವೆಂಕಯ್ಯನಾಯ್ಡು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT