ಲಂಕಾ ಸುಪ್ರೀಂ ಕೋರ್ಟ್ 
ವಿದೇಶ

ಶ್ರೀಲಂಕಾ ರಾಜಕೀಯ ಬಿಕ್ಕಟ್ಟು: ಸಂಸತ್ ವಿಸರ್ಜನೆಗೆ ಸುಪ್ರೀಂ ತಡೆ

ಶ್ರೀಲಂಕಾ ಸಂಸತ್ ವಿಸರ್ಜನೆಗೆ ಲಂಕಾ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರಿಗೆ ಭಾರಿ ಹಿನ್ನಡೆಯಾಗಿದೆ.

ಕೊಲಂಬೊ: ಶ್ರೀಲಂಕಾ ಸಂಸತ್ ವಿಸರ್ಜನೆಗೆ ಲಂಕಾ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರಿಗೆ ಭಾರಿ ಹಿನ್ನಡೆಯಾಗಿದೆ.
ಲಂಕಾ ರಾಜಕೀಯ ಬಿಕ್ಕಟ್ಟು ಇಂದು ಹೊಸ ತಿರುವು ಪಡೆದುಕೊಂಡಿದ್ದು, ಅವಧಿಗಿಂತ ಮೊದಲೈ ಸಂಸತ್ತನ್ನು ವಿಸರ್ಜಿಸಿದ್ದ ಮೈತ್ರಿಪಾಲ್ ಸಿರಿಸೇನಾ ಅವರ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಸಂಸತ್ ವಿಸರ್ಜನೆ ಪ್ರಶ್ನಿಸಿ ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗದ ಸದಸ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತಾಂತ್ರಿಕ ಕಾರಣಗಳಿಂದಾಗಿ ಶ್ರೀಲಂಕಾ ಅಧ್ಯಕ್ಷ ನಿರ್ಧಾರಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದೆ.
ಮೈತ್ರಿಪಾಲ್ ಸಿರಿಸೇನಾ ಅವರು ನವೆಂಬರ್ 9ರಂದು ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಿದ್ದರು.
ಅಕ್ಟೋಬರ್ 26ರಂದು ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ, ಪ್ರಧಾನಿ ಹುದ್ದೆಗೆ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸೆ ಅವರನ್ನು ನೇಮಕ ಮಾಡಿದ್ದರು. ಆದರೆ ಮಹಿಂದ ರಾಜಪಕ್ಸೆ ಬಹುಮತ ಸಾಬೀತುಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಲಂಕಾ ಸಂಸತ್ತನ್ನು ವಿಸರ್ಜಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT