ಕಾಂಗರೂ ನಾಡಲ್ಲಿ ಶಾಂತಿದೂತನ ಕಲರವ: ಗಾಂಧಿ ಪ್ರತಿಮೆ ಅನಾವಣಗೊಳಿಸಿದ ರಾಷ್ಟ್ರಪತಿ ಕೋವಿಂದ್ 
ವಿದೇಶ

ಕಾಂಗರೂ ನಾಡಲ್ಲಿ ಶಾಂತಿದೂತನ ಕಲರವ: ಗಾಂಧಿ ಪ್ರತಿಮೆ ಅನಾವಣಗೊಳಿಸಿದ ರಾಷ್ಟ್ರಪತಿ ಕೋವಿಂದ್

3 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಸಿಡ್ನಿಯಲ್ಲಿ ಗುರುವಾರ ಶಾಂತಿದೂತ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು...

ಆಸ್ಟ್ರೇಲಿಯಾ: 3 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಸಿಡ್ನಿಯಲ್ಲಿ ಗುರುವಾರ ಶಾಂತಿದೂತ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. 
ಮಹಾತ್ಮ ಗಾಂಧೀಜಿಯವರ 150ನೇ ಜನ್ಮವಾರ್ಷಿಕೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಇಡೀ ವಿಶ್ವವೇ ಗುರ್ತಿಸುವಂತಹ ವ್ಯಕ್ತಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ರಾಷ್ಟ್ರಪತಿ ಕೋವಿಂದ್ ಅವರು ಹೇಳಿದ್ದಾರೆ. 
ಪ್ರತಿಮೆ ಅನಾವರಣದ ವೇಳೆ ಸ್ಥಳದಲ್ಲಿದ್ದ ಭಾರತೀಯ ಸಮುದಾಯದ ಸದಸ್ಯರು ಭಾರತ್ ಮಾತಾ ಕೀ ಜೈ ಮತ್ತು ವಂದೇ ಮಾತರಂ ಘೋಷಣೆಗಳನ್ನು ಕೂಗಿದರು. 
ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮೊರಿನ್ಸನ್ ಹಾಗೂ ಪಾರಮಟ್ಟ ಮೇಯರ್ ಆ್ಯಂಡ್ರೀವ್ ವಿಲ್ಸನ್ ಭಾಗವಿಸಿದ್ದರು. 
ಗಾಂಧಿ ಪ್ರತಿಮೆಯನ್ನು ಭಾರತೀಯ ಮೂಲದ ಶಿಲ್ಪಿಗಳಾದ ರಾಮ್ ಮತ್ತು ಅನಿಲ್ ಎಂಬುವವರು ನಿರ್ಮಿಸಿದ್ದಾರೆ. 
ಪ್ರತಿಮೆ ಅನಾವರಣದ ಬಳಿಕ ಕೋವಿಂದ್ ಅವರಿಗೆ ಹಿಂದ್ ಸ್ವರಾಜ್ ಎಂಬ ಪುಸ್ತಕವನ್ನು ಆಸ್ಟ್ರೇಲಿಯಾ ಪ್ರಧಾನಮಂತ್ರಿಗಳು ಉಡುಗೊರೆಯಾಗಿ ನೀಡಿದರು. 
1909ರಲ್ಲಿ ಗಾಂಧೀಜಿಯವರು ರಚಿಸಿದ ಈ ಕೃತಿಯಲ್ಲಿ ಸ್ವಾತಂತ್ರ್ಯದ ರಾಷ್ಟ್ರೀಯ ಪರಿಕಲ್ಪನೆಗಳು, ನಾಗರೀಕತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT