ಸಂಗ್ರಹ ಚಿತ್ರ 
ವಿದೇಶ

ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಪಾಕ್ ಅವಮಾನ: ಪ್ರತಿಭಟನೆ ದಾಖಲಿಸಿದ ಭಾರತ

ಕರ್ತಾರ್ಪುರ ಕಾರಿಡಾರ್ ಒಪ್ಪಂದವಾದ 24 ಗಂಟೆಗಳಲ್ಲೇ ಗುರುದ್ವಾರಕ್ಕೆ ತೆರಳಲು ಮುಂದಾಗಿದ್ದ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ...

ನವದೆಹಲಿ: ಕರ್ತಾರ್ಪುರ ಕಾರಿಡಾರ್ ಒಪ್ಪಂದವಾದ 24 ಗಂಟೆಗಳಲ್ಲೇ ಗುರುದ್ವಾರಕ್ಕೆ ತೆರಳಲು ಮುಂದಾಗಿದ್ದ  ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಪಾಕಿಸ್ತಾನ ಅವಮಾನ ಮಾಡಿದ್ದು, ಪಾಕಿಸ್ತಾನದ ಈ ದುರ್ವರ್ತನೆಗೆ ಭಾರತ ಶುಕ್ರವಾರ ತೀವ್ರ ಪ್ರತಿಭಟನೆ ದಾಖಲಿಸಿದೆ. 
ಪಾಕಿಸ್ತಾನ ವಿದೇಶಾಂಗ ಸಚಿವಾಲಯವೇ ಈ ಹಿಂದೆ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಗುರುದ್ವಾರ ಪ್ರವೇಶಿಸಲು ಅನುಮತಿ ನೀಡಿತ್ತು. ಅನುಮತಿ ನೀಡಿದ್ದರೂ, ನ.21 ಮತ್ತು 22 ರಂದು ಗುರುದ್ವಾರಕ್ಕೆ ತೆರಳಿದ್ದ ಭಾರತೀಯ ರಾಯಭಾರಿ ಅಧಿಕಾರಿಗಳ ಮೇಲೆ ನಿರ್ಬಂಧ ಹೇರಿ ಕಿರುಕುಳ ನೀಡಲಾಗಿದೆ. ಪಾಕಿಸ್ತಾನದ ಈ ವರ್ತನೆ ವಿರುದ್ಧ ಭಾರತ ಪ್ರತಿಭಟಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. 
ಗುರುದ್ವಾರಕ್ಕೆ ತೆರಳುತ್ತಿದ್ದ ಭಾರತೀಯ ಅಧಿಕಾರಿಗಳಿಗೆ ಅನುಮತಿ ನಿರಾಕರಿಸುವ ಮೂಲಕ ಪಾಕಿಸ್ತಾನ ಅವಮಾನ ಮಾಡಿದೆ.
ಭಾರತ ಹಾಗೂ ಇಡೀ ವಿಶ್ವದಲ್ಲಿ ಸಾಕಷ್ಟು ಗುರುದ್ವಾರಗಳಿವೆ. ಆದರೆ, ಎಲ್ಲಿಯೂ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ನಮಗೆ ಈ ರೀತಿ ಆಗುತ್ತಿರುವುದು ಇದೇ ಮೊದಲು, ಗುರುದ್ವಾರಕ್ಕೆ ತೆರಳುತ್ತಿದ್ದ ವೇಳೆ ನಮ್ಮನ್ನು ಪಾಕಿಸ್ತಾನ ಅಧಿಕಾರಿಗಳು ತಡೆಹಿಡಿದರು. ಇದು ಗುರುದ್ವಾರದ ಪಾವಿತ್ರ್ಯತೆಯನ್ನು ನಾಶ ಮಾಡಿದಂತಾಗುತ್ತದೆ. ಎಂದು ಭಾರತೀಯ ರಾಯಭಾರಿ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT