ಲಾಹೋರ್: ಭಾರತೀಯ ಅಧಿಕಾರಿಗಳಿಗೆ ಮತ್ತೊಮ್ಮೆ ಅವಮಾನಿಸಿದ ಪಾಕ್ 
ವಿದೇಶ

ಲಾಹೋರ್: ಭಾರತೀಯ ಅಧಿಕಾರಿಗಳಿಗೆ ಮತ್ತೊಮ್ಮೆ ಅವಮಾನಿಸಿದ ಪಾಕ್

ಭಾರತೀಯ ಯಾತ್ರಾರ್ಥಿಗಳನ್ನು ಭೇಟಿ ಮಾಡುವ ಸಲುವಾಗಿ ಲಾಹೋರ್'ನ ಫರೂಖಾಬಾದ್ನಲ್ಲಿರುವ ಗುರುದ್ವಾರ ಸಚ್ಛಾ ಸೌಧಕ್ಕೆ ತೆರಳುತ್ತಿದ್ದ ಭಾರತೀಯ ಅಧಿಕಾರಿಗೆ ಪಾಕಿಸ್ತಾನ ಮತ್ತೊಮ್ಮೆ ಅವಮಾನಿಸಿದೆ...

ಲಾಹೋರ್: ಭಾರತೀಯ ಯಾತ್ರಾರ್ಥಿಗಳನ್ನು ಭೇಟಿ ಮಾಡುವ ಸಲುವಾಗಿ ಲಾಹೋರ್'ನ ಫರೂಖಾಬಾದ್ನಲ್ಲಿರುವ ಗುರುದ್ವಾರ ಸಚ್ಛಾ ಸೌಧಕ್ಕೆ ತೆರಳುತ್ತಿದ್ದ ಭಾರತೀಯ ಅಧಿಕಾರಿಗೆ ಪಾಕಿಸ್ತಾನ ಮತ್ತೊಮ್ಮೆ ಅವಮಾನಿಸಿದೆ. 
ನಾನ್ಕಾನ ಸಾಹಿಬ್ ಹಾಗೂ ಗುರುದ್ವಾರ ಸಚ್ಛಾ ಸೌಧಲಲ್ಲಿ ಸಿಕ್ಖ್ ಸಮುದಾಯದವರು ಶ್ರೀ ಗುರು ನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದು, ಇದರ ನಡುವೆಯೇ ಇಸ್ಲಾಮಾಬಾದ್'ನ ಭಾರತೀಯ ರಾಯಭಾರಿ ಅಧಿಕಾರಿಗಳಾದ ರಂಜಿತ್ ಸಿಂಗ್ ಹಾಗೂ ಸುನಿಲ್ ಕುಮಾರ್ ಅವರಿಗೆ ಪಾಕಿಸ್ತಾನ ಅವಮಾನಿಸಿದೆ. 
ಗುರುದ್ವಾರಕ್ಕೆ ತೆರಳುತ್ತಿದ್ದ ಭಾರತೀಯ ಅಧಿಕಾರಿಗಳಿಗೆ ಅನುಮತಿ ನಿರಾಕರಿಸುವ ಮೂಲಕ ಪಾಕಿಸ್ತಾನ ಅವಮಾನ ಮಾಡಿದೆ. 
ಭಾರತ ಹಾಗೂ ಇಡೀ ವಿಶ್ವದಲ್ಲಿ ಸಾಕಷ್ಟು ಗುರುದ್ವಾರಗಳಿವೆ. ಆದರೆ, ಎಲ್ಲಿಯೂ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ನಮಗೆ ಈ ರೀತಿ ಆಗುತ್ತಿರುವುದು ಇದೇ ಮೊದಲು, ಗುರುದ್ವಾರಕ್ಕೆ ತೆರಳುತ್ತಿದ್ದ ವೇಳೆ ನಮ್ಮನ್ನು ಪಾಕಿಸ್ತಾನ ಅಧಿಕಾರಿಗಳು ತಡೆಹಿಡಿದರು. ಇದು ಗುರುದ್ವಾರದ ಪಾವಿತ್ರ್ಯತೆಯನ್ನು ನಾಶ ಮಾಡಿದಂತಾಗುತ್ತದೆ. ಎಂದು ಭಾರತೀಯ ರಾಯಭಾರಿ ಅಧಿಕಾರಿಗಳು ಹೇಳಿದ್ದಾರೆ. 
ಗುರುದ್ವಾರದ ಬಳಿ ಬಂದ ಬಳಿಕ ಅಧಿಕಾರಿಗಳನ್ನು ಪಾಕಿಸ್ತಾನ ಅಧಿಕಾರಿಗಳು ತಡೆಹಿಡಿದಿದ್ದಾರೆ. ಸಾಮಾನ್ಯ ಯಾತ್ರಾರ್ಥಿಗಳಂತೆಯೇ ತಮ್ಮನ್ನೂ ಒಳ ಪ್ರವೇಶಿಸಲು ಬಿಡುವಂತೆ ತಿಳಿಸಿದರೂ, ಪಾಕಿಸ್ತಾನ ಅಧಿಕಾರಿಗಳು ಕೇಳಿಲ್ಲ. ಪಂಜಾಬ್ ಸಿಂಘ್ ಸಂಗತ್ ಮುಖ್ಯಸ್ಥ ಗೋಪಾಲ್ ಸಿಂಗ್ ಚಾವ್ಲಾ ಅವರು ಭಾರತೀಯ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿ, ಮತ್ತೊಂದು ದಿನ ಬರುವಂತೆ ತಿಳಿಸಿದ್ದಾರೆಂದು ತಿಳಿಸಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಎಂಪಿಎ ರಮೇಶ್ ಸಿಂಗ್ ಆರೋರ ಹಾಗೂ ತಾರಾ ಸಿಂಗ್ ಹಾಗೂ ಇತರೆ ಸಂಘಟನೆಗಳು ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಸಹಾಯ ಮಾಡುವ ಸ್ಥಿತಿಯಲ್ಲಿ ನಾವಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!