ಕೇರಳದ ಪ್ರವಾಹದ ಚಿತ್ರ 
ವಿದೇಶ

ಕೇರಳ ಪ್ರವಾಹ ರಕ್ಷಣೆ: ಭಾರತೀಯ ನೌಕಾಪಡೆ ಕಮಾಂಡರ್, ಕ್ಯಾಪ್ಟನ್ ಗೆ 'ಏಷ್ಯನ್ ಆಫ್ ದಿ ಇಯರ್ 'ಪ್ರಶಸ್ತಿ

ಕೇರಳದ ಪ್ರವಾಹದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಜನರನ್ನು ರಕ್ಷಿಸಿದ್ದ ಭಾರತೀಯ ನೌಕ ಕಮಾಂಡರ್ ಹಾಗೂ ಕ್ಯಾಪ್ಟನ್ ಗೆ 'ಏಷ್ಯನ್ ಆಫ್ ದಿ ಇಯರ್ 'ಪ್ರಶಸ್ತಿ ಸಂದಿದೆ.

ಸಿಂಗಾಪುರ: ಕೇರಳದ ಪ್ರವಾಹದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಜನರನ್ನು ರಕ್ಷಿಸಿದ್ದ ಭಾರತೀಯ ನೌಕ ಕಮಾಂಡರ್ ಹಾಗೂ ಕ್ಯಾಪ್ಟನ್  ಗೆ 'ಏಷ್ಯನ್  ಆಫ್ ದಿ ಇಯರ್ 'ಪ್ರಶಸ್ತಿ  ಸಂದಿದೆ.

ನೌಕಾಪಡೆಯ ಕಮಾಂಡರ್  ವಿಜಯ್ ವರ್ಮಾ ಹಾಗೂ ಕ್ಯಾಪ್ಟನ್  ಪಿ. ರಾಜ್ ಕುಮಾರ್  ಅವರು ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

42 ವರ್ಷದ ಕಮಾಂಡರ್ ವರ್ಮಾ, ಕೊಚ್ಚಿಯಲ್ಲಿ  ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದ್ದ ತುಂಬು ಗರ್ಭೀಣಿಯನ್ನು ಹೆಲಿಕಾಪ್ಟರ್ ಸಹಾಯದಿಂದ ರಕ್ಷಿಸಿದ್ದರು. ನಂತರ ಅವರು ಮಗುವಿಗೆ ಜನ್ಮ ನೀಡಿದ್ದರು. ವರ್ಮಾ ಅವರ ಈ ಅಪ್ರತಿಮ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿತ್ತು.

ಮತ್ತೊಂದೆಡೆ ಕೊಚ್ಚಿಯಲ್ಲಿ ಮರಗಳು ಹಾಗೂ ಇತರ ಮನೆಗಳ ಮೇಲ್ಛಾವಣೆಯಲ್ಲಿದ್ದ  26 ಮಂದಿಯನ್ನು  ಕ್ಯಾಪ್ಟನ್ ರಾಜ್ ಕುಮಾರ್  ರಕ್ಷಿಸಿದ್ದರು.

ತುಂಬು ಗರ್ಭೀಣಿಯನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸುವ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.  32 ಜನರನ್ನು ರಾಜ್ ಕುಮಾರ್ ರಕ್ಷಿಸಿದ್ದರು.

ಆಗಸ್ಟ್ ತಿಂಗಳಲ್ಲಿ ಜಲಪ್ರಳಯದಿಂದಾಗಿ ದ್ವೀಪದಂತಾಗಿದ್ದ ಕೇರಳದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ಡಜನ್ ಗೂ ಹೆಚ್ಚು ಹೆಲಿಕಾಪ್ಟರ್ ಗಳಿಂದ ಭಾರತೀಯ ನೌಕ ಪಡೆ ಪೈಲಟ್ ಗಳು ರಕ್ಷಿಸಿದ್ದರು. ಸಂಕಷ್ಟ ಸಂದರ್ಭದಲ್ಲಿ ಅಪ್ರತಿಮ ಸಾಹಸ ತೋರಿದ ಅನೇಕ ಪುರುಷರು ಹಾಗೂ ಮಹಿಳೆಯರಿಗೆ ಪ್ರಶಸ್ತಿ ನೀಡಿರುವುದಾಗಿ  ಸ್ಟ್ರೈಟ್ಸ್  ಟೈಮ್ಸ್ ಡೈಲಿ ಸಂಪಾದಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂಡೊನೇಷ್ಯಾದ ಸುಳಾವೆಸಿಯಲ್ಲಿ ಭೂಕಂಪದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಮೂಲಕ ಹಲವರನ್ನು ರಕ್ಷಿಸಿದ್ದ ಸಿಂಗಾಪುರದ ನಗ್ ಕೊಕ್ ಚೂಂಗ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT