ದುರಂತದ ನಂತರದ ಚಿತ್ರ 
ವಿದೇಶ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ- ಸುನಾಮಿ: ಮೃತರ ಸಂಖ್ಯೆ 1,234ಕ್ಕೆ ಏರಿಕೆ!

ಭೂಕಂಪನ ಹಾಗೂ ಸುನಾಮಿ ಅಪ್ಪಳಿಸಿರುವ ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಮೃತಪಟ್ಟವರ ಸಂಖ್ಯೆ 1 ಸಾವಿರದ 234ಕ್ಕೆ ಏರಿಕೆ ಆಗಿದೆ.

ಜಕಾರ್ತ :  ಭೂಕಂಪನ ಹಾಗೂ ಸುನಾಮಿ  ಅಪ್ಪಳಿಸಿರುವ ಇಂಡೋನೇಷ್ಯಾದ ಸುಲಾವೆಸಿ  ದ್ವೀಪದಲ್ಲಿ ಮೃತಪಟ್ಟವರ ಸಂಖ್ಯೆ 1 ಸಾವಿರದ 234ಕ್ಕೆ ಏರಿಕೆ ಆಗಿದೆ.

ಸುನಾಮಿಯಿಂದ ಉಂಟಾಗಿರುವ ಹಾನಿ ಸಂಬಂಧ ಇಂಡೋನೇಷ್ಯಾ ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಹೊಸದಾದ ಅಂಕಿ ಅಂಶವನ್ನು ಬಿಡುಗಡೆ ಮಾಡಿದೆ ಎಂದು ಅಲ್ ಜಜೀರಾ  ವರದಿ ಮಾಡಿದೆ. ಎರಡು ದಿನಗಳ ಹಿಂದಷ್ಟೇ ಸುನಾಮಿಯಿಂದ  832 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು.

500 ಮಂದಿ ಗಾಯಗೊಂಡಿದ್ದು, 16. 372 ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು  ಏಜೆನ್ಸಿ ತಿಳಿಸಿದೆ.

ಇಂಡೋನೇಷ್ಯಾದ ದ್ವೀಪ ಪ್ರದೇಶವಾಗಿರುವ ಸುಲಾವಾಸಿಯಲ್ಲಿ ಎರಡು ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಹಾಗೂ 6.1 ರಷ್ಚು ದಾಖಲಾಗಿದೆ. ಶುಕ್ರವಾರ  ಸುನಾಮಿಯಿಂದಾಗಿ ಅಪಾರ  ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗಿತ್ತು.

ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ  ಅಧ್ಯಕ್ಷ ಜೊಕೊ ವಿಡೊಡೊ ಅವರಿಗೆ ಭರವಸೆ ನೀಡಿದ್ದಾರೆ. ಈ ಮಧ್ಯೆ  ಭಾರತೀಯ ನೌಕ ಮತ್ತು ವಾಯುಪಡೆಯಿಂದ ಮೂರು ಹಡಗುಗಳು ಮತ್ತು ಎರಡು ವಿಮಾನಗಳಲ್ಲಿ ಪರಿಹಾರ ಸಲಕರಣೆಗಳನ್ನು ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT