ಸಂಗ್ರಹ ಚಿತ್ರ 
ವಿದೇಶ

ವಿವಾದಗಳ ನಡುವೆಯೇ 2019ಕ್ಕೆ ಭಾರತಕ್ಕೆ ಹಾರಲಿವೆ ರಾಫೆಲ್ ಯುದ್ಧ ವಿಮಾನಗಳು!

ಭಾರತದಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ವಿವಾದ ಹಸಿರಾಗಿರುವಾಗಲೇ 201ರಿಂದಲೇ ರಾಫೆಲ್ ಯುದ್ಧ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಡಸ್ಸಾಲ್ಟ್ ಏವಿಯೇಷನ್ ಸಂಸ್ಥೆಯ ಸಿಇಒ ಎರಿಕ್ ಟ್ರ್ಯಾಪಿಯರ್ ಹೇಳಿದ್ದಾರೆ.

ಒರ್ಲ್ಯಾಂಡೊ: ಭಾರತದಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ವಿವಾದ ಹಸಿರಾಗಿರುವಾಗಲೇ 201ರಿಂದಲೇ ರಾಫೆಲ್ ಯುದ್ಧ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಡಸ್ಸಾಲ್ಟ್ ಏವಿಯೇಷನ್ ಸಂಸ್ಥೆಯ ಸಿಇಒ ಎರಿಕ್ ಟ್ರ್ಯಾಪಿಯರ್ ಹೇಳಿದ್ದಾರೆ.
ಅಮೆರಿಕದ ಒರ್ಲಾಂಡೋದಲ್ಲಿ ನಡೆಯುತ್ತಿರುವ ವಿಶ್ವದ ಅತೀ ದೊಡ್ಡ ಜೆಟ್ ವಿಮಾನಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸುದ್ದಿಸಂಸ್ಥೆಯೊಂದರೊಂದಿಗೆ ಮಾತನಾಡಿದ ರಾಫೇಲ್ ಜೆಟ್ ಯುದ್ಧ ವಿಮಾನ ತಯಾರಕ ಕಂಪನಿ ಫ್ರಾನ್ಸ್ ನ ಡಸಾಲ್ಟ್ ಕಂಪನಿ ಸಿಇಒ ಎರಿಕ್ ಟ್ರ್ಯಾಪಿಯರ್ ಅವರು, 2019ರ ಮಧ್ಯಭಾಗದಿಂದ ಭಾರತಕ್ಕೆ ರಾಫೆಲ್ ಯುದ್ಧ ವಿಮಾನಗಳು ಹಸ್ತಾಂತರವಾಗಲಿದೆ. ಅಲ್ಲದೆ ಪ್ರಸ್ತುತ 36 ರಾಫೆಲ್ ಯುದ್ಧ ವಿಮಾನಗಳಿಗೆ ಒಪ್ಪಂದವಾಗಿದ್ದು, ಭವಿಷ್ಯದ ದಿನಗಳಲ್ಲಿ ಮತ್ತಷ್ಟು ವಿಮಾನಗಳನ್ನು ಖರೀದಿಸುವ ಕುರಿತು ಭಾರತ ಸರ್ಕಾರ ಒಲವು ತೋರಬಹುದು ಎಂದು ಎರಿಕ್ ಟ್ರ್ಯಾಪಿಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಭಾರತದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೇಲ್ ಡೀಲ್ ಕುರಿತಂತೆ ಇದೊಂದು ದೊಡ್ಡ ಹಗರಣ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅಲ್ಲದೆ ಯುದ್ಧವಿಮಾನ ಒಪ್ಪಂದ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದೂ ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು, ರಾಫೇಲ್ ಯುದ್ಧ ವಿಮಾನಗಳ ಬಿಡಿಭಾಗಗಳ ತಯಾರಿಕೆಗೆ ಡಸಾಲ್ಟ್ ಕಂಪನಿ ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಅನ್ನು ಆಯ್ಕೆ ಮಾಡಿಕೊಂಡಿದೆ. ಆದರೆ ರಿಲಯನ್ಸ್ ಅನ್ನು ಆಯ್ಕೆ ಮಾಡಿಕೊಂಡದ್ದು ಡಸಾಲ್ಟ್ ಕಂಪನಿ ನಿರ್ಧಾರವಲ್ಲ. ಬದಲಾಗಿ ಕೇಂದ್ರ ಸರ್ಕಾರವೇ ಅನಿಲ್ ಅಂಬಾನಿಗೆ ನೆರವು ನೀಡುವ ಸಲುವಾಗಿ ರಿಲಯನ್ಸ್ ಅನ್ನು ಆಯ್ಕೆ ಮಾಡಿಕೊಳ್ಳುವಂತೆ ಡಸಾಲ್ಟ್ ಮೇಲೆ ಒತ್ತಡ ಹೇರಿತ್ತು ಎಂದು ಆರೋಪಿಸಿತ್ತು.
ಅಲ್ಲದೆ ಇತ್ತೀಚೆಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಫ್ರಾನ್ಸ್ ಗೆ ಭೇಟಿ ನೀಡಿದ್ದರು. ಅಲ್ಲದೆ ಡಸಾಲ್ಟ್ ಕಂಪನಿಗೂ ಭೇಟಿ ನೀಡಿದ್ದರು. ರಫೇಲ್ ಡೀಲ್ ವಿವಾದವನ್ನು ಮುಚ್ಚಿ ಹಾಕಲು ನಿರ್ಮಲಾ ಸೀತಾರಾಮನ್ ಫ್ರಾನ್ಸ್ ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT