ನವೀಕರಿಸಬಹುದಾದ ಇಂಧನ ಹೂಡಿಕೆ: ಇನ್ವೆಸ್ಟ್ ಇಂಡಿಯಾಗೆವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ 
ವಿದೇಶ

ನವೀಕರಿಸಬಹುದಾದ ಇಂಧನ ಹೂಡಿಕೆ: ಇನ್ವೆಸ್ಟ್ ಇಂಡಿಯಾಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ

ವಿಶ್ವಸಂಸ್ಥೆಯಿಂದ ಕೊಡಮಾಡಲಾಗುವ ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತವಾದ ಪ್ರಶಸ್ತಿಯಾದ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ನೀಡಿರುವ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಿಂದ ಕೊಡಮಾಡಲಾಗುವ ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತವಾದ ಪ್ರಶಸ್ತಿಯಾದ  'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ನೀಡಿರುವ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ. 
ಈ ಬಾರಿ ನವೀಕರಿಸಬಹುದಾದ ಇಂಧನ ವಿಭಾಗದಲ್ಲಿ ಹೂಡಿಕೆಯನ್ನು ಉತ್ತೇಜಿಸುತ್ತಿರುವುದಾಗಿ ಭಾರತಕ್ಕೆ ವಿಶ್ವಸಂಸ್ಥೆಯ ಪ್ರತಿಷ್ಠಿ ಪ್ರಶಸ್ತಿ ಲಭ್ಯವಾಗಿದ್ದು, ಇನ್ವೆಸ್ಟ್ ಇಂಡಿಯಾದ ಸಿಇಒ ದೀಪಕ್ ಬಾಗ್ಲಾ ಅವರಿಗೆ ಜಿನಿವಾದಲ್ಲಿ ಅರ್ಮೇನಿಯನ್ ಅಧ್ಯಕ್ಷರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. 
ಯುಎನ್ ಸಿಟಿಎಡಿ ನವೀಕರಿಸಬಹುದಾದ ಇಂಧನ  ಹೂಡಿಕೆಯ ವಿಷಯದಲ್ಲಿ ಭಾರತದ ಉತ್ತೇಜನದ ಬಗ್ಗೆ ಮಾತನಾಡಿದ್ದು, ಭಾರತ ಜಾಗತಿಕ ಮಟ್ಟದ ವಿಂಡ್ ಟರ್ಬೈನ್ ಕಂಪನಿಗಳಿಗೆ ಬ್ಲೇಡ್ ಉತ್ಪಾದನಾ ಘಟಕವನ್ನು ಸ್ಥಾಪಿಸುವುದಕ್ಕೆ ಉತ್ತೇಜನ ನೀಡುತ್ತಿರುವುದನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದಾಗಿ ಹೇಳಿದೆ.  ಕಾರ್ಯಕ್ರಮದಲ್ಲಿ 160 ರಾಷ್ಟ್ರಗಳಿಂದ 5,000 ಪ್ರತಿನಿಧಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT