ರಾನಿಲ್ ವಿಕ್ರಮಸಿಂಘೆ 
ವಿದೇಶ

ರಾನಿಲ್ ವಿಕ್ರಮಸಿಂಘೆ ಪ್ರಧಾನಿ ಎಂದು ಗುರುತಿಸಿದ ಲಂಕಾ ಸ್ಪೀಕರ್

ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಚ್ಚಾಟಿತ ಪ್ರಧಾನಿ...

ಕೊಲಂಬೊ: ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು,  ಉಚ್ಚಾಟಿತ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರೇ ಈಗಲೂ ಪ್ರಧಾನಿ ಎಂದು ಶ್ರೀಲಂಕಾ ಸಂಸತ್ ಸ್ಪೀಕರ್ ಕರು ಜಯಸೂರ್ಯ ಅವರು ಗುರುತಿಸಿದ್ದಾರೆ.
ಜಯಸೂರ್ಯ ಅವರು ಈ ಸಂಬಂಧ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರಿಗೆ ಪತ್ರ ಬರೆದಿದ್ದು, ನವೆಂಬರ್ 16ರವರೆಗೆ ಸಂಸತ್ ಕಲಾಪ ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿದ್ದಾರೆ.
ವಿಕ್ರಮಸಿಂಘೆ ಅವರು ಜನಾದೇಶ ಪಡೆದಿದ್ದು, ಅವರನ್ನೇ ಪ್ರಧಾನಿಯಾಗಿ ಪುನರ್ ಸ್ಥಾಪಿಸಿ. ಈ ಮೂಲಕ ಪ್ರಜಾಪ್ರಭುತ್ವ ಮತ್ತು ಉತ್ತಮ ಸರ್ಕಾರ ರಕ್ಷಿಸುವಂತೆ ಸ್ಪೀಕರ್ ಸಿರಿಸೇನಾ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ಸಂಸತ್ ಅಮಾನತುಗೊಳಿಸಿರುವುದು ಅನಪೇಕ್ಷಿತ ಎಂದಿದ್ದಾರೆ.
ಸಿರಿಸೇನಾ ಅವರು ಕಳೆದ ಶುಕ್ರವಾರ ಪ್ರಧಾನಿ ರಾನಿಲ್​ ವಿಕ್ರಮಸಿಂಘೆ ಅವರನ್ನು ಉಚ್ಚಾಟಿಸಿ, ಮಹಿಂದ ರಾಜಪಕ್ಸೆ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT