ಅರ್ಜುನ ರಣತುಂಗ 
ವಿದೇಶ

ಲಂಕಾ ರಾಜಕೀಯ ಬಿಕ್ಕಟ್ಟು: ಗುಂಡು ಹಾರಿಸಿದ ಉಚ್ಚಾಟಿತ ಸಚಿವರ ಅಂಗರಕ್ಷಕ, ಓರ್ವ ಸಾವು

ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ ಸಚಿವ...

ಕೊಲಂಬೊ: ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರ ಅಂಗರಕ್ಷಕ ಜನರ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಅರ್ಜುನ ರಣತುಂಗ ಅವರು ಇಂದು ಸೆಲಾನ್ ಪೆಟ್ರೋಲಿಯಂ ಕಾರ್ಪೋರೇಷನ್ ನಲ್ಲಿರುವ ತಮ್ಮ ಕಚೇರಿಗೆ ತೆರಳಿದ್ದರು. ಈ ವೇಳೆ ನೂತನ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಬೆಂಬಲಿಗರು ಕಚೇರಿ ಪ್ರವೇಶಿಸಲು ಅರ್ಜನ ರಣತುಂಗ ಅವರನ್ನು ತಡೆದು, ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಅವರ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಅವರು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅರ್ಜುನ ರಣತುಂಗ ಅವರ ಇಬ್ಬರು ಅಂಗರಕ್ಷಕರನ್ನು ಬಂಧಿಸಲಾಗಿದೆ.
ಕಳೆದ ಶುಕ್ರವಾರ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರು ಪ್ರಧಾನಿ ರಾನಿಲ್​ ವಿಕ್ರಮಸಿಂಘೆ ಅವರನ್ನು ಉಚ್ಚಾಟಿಸಿ, ಮಹಿಂದ ರಾಜಪಕ್ಸ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದು, ಅವರು ಸೋಮವಾರ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಅಧ್ಯಕ್ಷ ಸಿರಿಸೇನಾ ಅವರ ನಿರ್ಧಾರ ಅಕ್ರಮ ಮತ್ತು ಅಸಂವಿಧಾನಿಕ ಎಂದಿರುವ ವಿಕ್ರಮಸಿಂಘೆ ಅವರು, ತಾವು ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT